ನಾ. ಮೊಗಸಾಲೆಯವರು ಒಂದು ಕಡೆ ಹೇಳುತ್ತಾರೆ, ‘ಈಗಿನ ಕತೆಗಳು ಕತೆಗಳಾಗಿ ಉಳಿದಿಲ್ಲ’. ?? ವರ ?? ನುಭವದ ಈ ಮಾತು ನೂರಕ್ಕೆ ನೂರು ಸತ್ಯ. ಪತ್ರಿಕೆಗಳು ಇವತ್ತು ಕೇಳುತ್ತಿರುವುದು ಪೇಜ್ ಲಿಮಿಟ್ನ ಕತೆಗಳನ್ನು. ಇದು ಕತೆಗಾರನ ಸೃಜನಶೀಲತೆಗೆ ಸವಾಲಾದರೂ ಒಂದು ಸಣ್ಣ ಚೌಕಟ್ಟಿನೊಳಗೆ ಕತೆಯನ್ನು ಹಿಡಿದಿಡುವುದು ಸೃಜನಶೀಲತೆಯಲ್ಲ; ಬದಲಾಗಿ, ಫಿಜ್ಜಾ ಬರ್ಗರ್, ಚಾಟ್ ಐಟಂ ನಂತಹ ರುಚಿಯಿಲ್ಲದ, ಸತ್ವವಿಲ್ಲದ ಮತ್ತು ?? ನಾರೋಗ್ಯಕರ ಹಳಸಲು ತಿಂಡಿಗಳಂತೆ. ಹಿಂದಿನ ತಲೆಮಾರಿನ ಕತೆಗಾರರೆಲ್ಲ ಚೌಕಟ್ಟು ಹಾಕದೆ ಕತೆಗಳನ್ನು ಬರೆದಿರುವುದು ?? ವರಲ್ಲಿ ಸೃಜನಶೀಲತೆಯಿಲ್ಲದೆಯೆ? ಉದಾಹರಣೆಗೆ ರಾಘವೇಂದ್ರ ಖಾಸನೀಸರ ಕತೆಗಳನ್ನು ಕೈಗೆತ್ತಿಕೊಂಡರೆ ?? ವುಗಳನ್ನು ಓದುವುದೇ ಒಂದು ಚೇತೋಹಾರಿ ?? ನುಭವ. ?? ವರ ಕತೆಗಳಾವುವು ಪುಟವ್ಯಾಪ್ತಿಯನ್ನು ಹಾಕಿಕೊಂಡು ಬರೆದವಲ್ಲ. ?? ವುಗಳನ್ನು ನೀಳ್ಗತೆಗಳೆಂದು ಕರೆದರೂ ತಪ್ಪಲ್ಲ. ಆ ಕತೆಗಳನ್ನು ಇಂದಿಗೂ ಉಸಿರು ಬಿಗಿ ಹಿಡಿದು ಓದಿಸಿವುದು ಪುಟ ಮಿತಿಯಲ್ಲದ ಕತೆಯೆಂದೆ? ಇದು ನಾವು ಇಂದು ಕತೆಗಳ ಬಗ್ಗೆ ಮಾತನಾಡುವಾಗ ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕಿರುವ ಪ್ರಶ್ನೆ."
?? ಂತಹ ಪುಟವ್ಯಾಪ್ತಿಗೆ ಒಗ್ಗದೆ ಬರೆದ ಕತೆಗಳ ಸಮುಚ್ಚಯ ನಾ. ಮೊಗಸಾಲೆಯವರ, ಇತ್ತೀಚೆಗೆ ಬೆಳಕುಕಂಡ ಕತೆಗಳ ಸಂಕಲನ ‘ಸೀತಾಪುರದಲ್ಲಿ ಗಾಂಧೀಜಿ’. ಇಲ್ಲಿಯ ಕತೆಗಳಲ್ಲಿ ಕೇವಲ ಗಾಂಧೀಜಿಯನ್ನು ಹುಡುಕ ಹೊರಟರೆ ಆತ ನಿಮಗೆಲ್ಲೂ ಗೋಚರಿಸುವುದಿಲ್ಲ. ಬದಲಾಗಿ ಗಾಂಧೀಜಿಯಂತಹ ಕೆಲವೊಂದು ವ್ಯಕ್ತಿತ್ವಗಳನ್ನು ಕಾಣಬಹುದೆನ್ನುವುದು ಸುಳ್ಳಲ್ಲ. ಇದನ್ನು ಮುನ್ನುಡಿಯಲ್ಲಿ ಎಸ್. ಆರ್ ವಿಜಯಶಂಕರ್ ?? ವರು ಕೂಡ ಗುರುತಿಸಿದ್ದಾರೆ.
ಆರ್. ಕೆ. ನಾರಾಯಣರ ಕತೆಗಳಲ್ಲಿ ಬರುವ ‘ಮಾಲ್ಗುಡಿ’ಯಂತೆ ಮೊಗಸಾಲೆಯವರ ಕತೆಗಳಲ್ಲಿ ಕಾಣಸಿಗುವ ‘ಸೀತಾಪುರ’ ಒಂದು ಮಾದರಿ ಗ್ರಾಮದಂತೆ ನಮಗೆ ಗೋಚರವಾಗುತ್ತದೆ. ಇಲ್ಲಿಯ ಕತೆಗಳೆಲ್ಲವೂ ಸೀತಾಪುರದ ಸುತ್ತಮುತ್ತಲೂ ನಡೆಯುವ ಘಟನೆಗಳು ಮತ್ತು ಇಲ್ಲಿಯ ಕತೆಗಳನ್ನು ಓದುವಾಗ ಒಂದು ಕಾದಂಬರಿಯನ್ನು ಓದಿದ ?? ನುಭವವೂ ನಮಗಾಗದಿರದು. ಪೂರ್ಣಚಂದ್ರ ತೇಜಸ್ವಿ ?? ವರ ‘ಮಾಯಾಲೋಕ’ದಂತಹ ಕೃತಿಗಳನ್ನು ಓದುವಾಗ ?? ದನ್ನು ನೀವು ಯಾವ ?? ಧ್ಯಾಯದಿಂದ ಆರಂಭಿಸಿದರೂ ನಿಮಗೆ ದಕ್ಕುವ ?? ನುಭವವು ಬೇರಯದೆ. ಹಾಗೆ ಇಲ್ಲಿಯ ಕತೆಗಳು ಕೂಡ, ಒಂದೇ ಪರಿಸರದಲ್ಲಿ ಘಟಿಸುವುದರಿಂದ ಕತೆಗಳೆಲ್ಲ ಆಪ್ತವೆನಿಸುತ್ತವೆ. ಸೀತಾಪುರ, ಕುಪ್ಪಣ್ಣ ಇಂತಹ ಪ್ರದೇಶ, ವ್ಯಕ್ತಿಗಳು ಪದೇ ಪದೇ ಎಲ್ಲಾ ಕತೆಗಳಲ್ಲಿ ಮರುಸೃಷ್ಟಿ ಪಡೆದುಕೊಳ್ಳುವುದರಿಂದ ‘ಸೀತಾಪುರದಲ್ಲಿ ಗಾಂಧೀಜಿ’ ಒಂದು ಸುಂದರ ಮತ್ತು ಸರಳ ಕಾದಂಬರಿಯಂತೆಯೂ ಕಾಣುತ್ತದೆ. ಇದಲ್ಲದೆ, ಕುಪ್ಪಣ್ಣಯ್ಯ ಪ್ರತೀಯೊಂದು ಸಮಸ್ಯೆಯಲ್ಲಿಯೂ ಮುಖಾಮುಖಿಯಾಗುತ್ತಾ ?? ವನ್ನು ನಿರಾಳವಾಗಿ ಪರಿಹರಿಸಿಕೊಳ್ಳಬೇಕಾದ ಸಂದರ್ಭದಲ್ಲಿ ಆದರ್ಶಪ್ರಾಯರಾಗಿ ಕಾಣಿಸುತ್ತಾರೆ.
‘ಸೀತಾಪುರದಲ್ಲಿ ಗಾಂಧೀಜಿ’, ಎಂದೋ ಒಮ್ಮೆ ಸೀತಾಪುರಕ್ಕೆ ಗಾಂಧೀಜಿ ಬಂದಿದ್ದಾರೆನ್ನುವುದಕ್ಕಿಂತ ?? ವರ ಬಂದಿರುವಿಕೆಯ ಪ್ರಭಾವ ಆ ಊರಿನ ಜನರ ಮೇಲೆ ಹೇಗೆ ಆಗಿದೆ ?? ನ್ನುವುದನ್ನು ಕೆಲವೊಂದು ಪಾತ್ರಗಳ ಮೂಲಕ ತಿಳಿಯುತ್ತದೆ. ಈ ಸಂಕಲನ ಗಾಂಧೀಜಿಯ ಕಾಲಕ್ಕೆ ಸೀಮಿತವಾಗದೆ ಇಂದಿನ ವಾಸ್ತವ ಚಿತ್ರಣವನ್ನ ಕಟ್ಟಿಕೊಡುವುದಲ್ಲದೆ, ಸಮಾಜಮುಖಿಯಾದ ಸಮಸ್ಯೆಗಳನ್ನು ಎತ್ತಿ ಹಿಡಿದು ಧ್ವನಿಸುತ್ತದೆ. ‘ಸುಣ್ಣ ಎದ್ದು ಹೋದ ಗೋಡೆ’ಯಲ್ಲಿ ಕನ್ನಡ ಶಾಲೆಗಳ ದುಸ್ಥಿತಿಯನ್ನು ಕತೆಯ ಮೂಲಕ ಜಾಗೃತಗೊಳಿಸುವ ಪ್ರಯತ್ನ ಮೊಗಸಾಲೆಯವರದ್ದು. ?? ದೇ ರೀತಿ ವಿಮಾನ ದುರಂತದ ಚಿತ್ರಣವಿರುವ ‘ಭೂಮಿ ಮತ್ತು ಆಕಾಶ’ ಕತೆಯಲ್ಲಿ ದುರಂತದ ಜೊತೆಗೇನೇ ನಿರುದ್ಯೋಗದ ಮತ್ತು ಪ್ರತಿಭಾ ಪಲಾಯನದ ಕುರಿತು ಕತೆ ಧ್ವನಿಸುವುದನ್ನು ಗಮನಿಸಬಹುದು. ಇದು ಮೊಗಸಾಲೆಯವರಿಗಿರುವ ಸಾಮಾಜಿಕ ಕಳಕಳಿಯನ್ನು ಕೂಡ ತೋರಿಸುತ್ತದೆ.
ಇನ್ನು ಇಲ್ಲಿಯ ಕತೆಗಳ ಬಗ್ಗೆ ಹೇಳುವುದಾದರೆ ಮೊದಲ ಕತೆ, ‘ಸೀತಾಪುರದಲ್ಲಿ ಗಾಂಧೀಜಿ’ ಸಂಕಲನದ ಉಳಿದ ಕತೆಗಳಿಗೆಲ್ಲ ಮುನ್ನುಡಿಯಾಗಿಯೂ ಮತ್ತು ಸೀತಾಪುರದ ಬಹುತೇಕ ಎಲ್ಲಾ ವರ್ಣನೆಗಳನ್ನೊಳಗೊಂಡು ಓದುಗನ ಮನಸ್ಸಿನಲ್ಲಿ ಒಂದು ?? ಚ್ಚಳಿಯದ ಪರಿಸರವನ್ನು ನಿರ್ಮಿಸಿ ಬಿಡುತ್ತದೆಯೆನ್ನುವುದು ನನ್ನ ?? ನುಭವ. ಸೀತಾಪುರದ ರಥಬೀದಿ, ಕುಪ್ಪಣ್ಣನ ಹೊಟೇಲು, ಸಮಯ ಸಮಯಕ್ಕೆ ಓಡಾಡುವ ಬಸ್ಸು, ಕೋಮುಸೌಹಾರ್ದತೆಯ ಬಾಂಧವ್ಯ ಇವೆಲ್ಲಾ ಕೊನೆಯ ಕತೆಯನ್ನು ಓದಿದ ಬಳಿಕವೂ ಮನಸ್ಸಿನಲ್ಲಿ ಉಳಿದು ಬಿಡುತ್ತವೆ. ಈ ಕತೆಯಲ್ಲಿ ಗ್ರಾಮಸೇವಕನಾಗಿ ಬರುವ ?? ಶ್ವತ್ಥನಾರಾಯಣನಿಗೆ ಕತೆ ಬರೆಯುವ ಗೀಳು. ನಾಗಪ್ಪನ ಬಗ್ಗೆ ಪತ್ರಿಕೆಯಲ್ಲಿ ಬರೆದಿರುವವನು ?? ವನೇ ?? ನ್ನುವ ಗುಮಾನಿಯೆದ್ದು, ?? ವನ ಮೇಲೆ ಹಲ್ಲೆ ನಡೆಯುತ್ತದೆ. ಇದಕ್ಕೆ ಕುಪ್ಪಣ್ಣಯ್ಯ ಬೆನ್ನೆಲುಬಾಗಿ ನಿಂತು ಕೇಸು ಕೋರ್ಟಿನವರೆಗೂ ತಲುಪುತ್ತದೆ. ಈ ಹೋರಾಟದಲ್ಲಿ ನ್ಯಾಯ ಬೇಕಾಗಿರುತ್ತದೆ. ಕೇಸು ರಾಜಿಪಂಚಾತಿಕೆಯಲ್ಲಿ ಕೊನೆಗೊಳ್ಳುವುದು ಬೇರೆ ಪ್ರಶ್ನೆ. ಆದರೆ ಇಲ್ಲಿಯ ಹೋರಾಟ ಗಾಂಧೀಜಿಯನ್ನು ನೆನಪಿಸುತ್ತದೆ. ಹಾಗೆ ಗಾಂಧೀಜಿಯನ್ನು ನೆನಪಿಸುವ ಕೆಲವೊಂದು ಪಾತ್ರಗಳು ಇಲ್ಲಿಯ ಕತೆಗಳಲ್ಲಿ ಕಾಣಸಿಗುತ್ತದೆ.
ಈ ಸಂಕಲನದ ಇನ್ನೊಂದು ಕತೆ, ‘ನುಗ್ಗೆ ಗಿಡ’. ವಾರದ ಸಂತೆಗೆ ಹೋಗಲು ಬಸ್ಸು ತಪ್ಪಿ, ತನಗೆ ವಹಿಸಿರುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗದೆ ನುಗ್ಗೆ ಕೋಡನ್ನು ಸಂತೆಯಿಂದ ತರಲಾಗದೆ ಚಡಪಡಿಸುವ ಕುಪ್ಪಣ್ಣಯ್ಯನಿಗೆ ತನಗೆ ?? ದನ್ನು ತರಲು ಹೇಳಿದವರ ಮನೆಯ ಮುಂದೆಯೇ ನುಗ್ಗೆಗಿಡವಿರುವುದನ್ನು ಕಂಡು ಆಶ್ಚರ್ಯವಾಗುತ್ತದೆ. ಆದರೆ ಈ ಕತೆಯಲ್ಲಿ ದನಿಯಿರುವುದು ನಾಟಿವೈದ್ಯೆ ಪ್ರೇಮಕ್ಕ ಸರ್ಪಸುತ್ತು ಕಾಯಿಲೆಗೆ ಕೊಡುವ ಔಷಧದಲ್ಲಿ. ಉಸ್ಮಾನನ ಕಾಯಿಲೆಯನ್ನು ನೋಡಿ ಔಷಧಕೊಡಲು ಮುಂದಾದ ಆಕೆಗೆ ಕಸಾಯಿಖಾನೆಗೆ ಹೋದ ತನ್ನ ಗಡಸು ದನದ ವಿಷಯ ತಿಳಿಯುತ್ತದೆ. ?? ದರಿಂದ ಒಮ್ಮೆ ಆಕೆ ಆಘಾತಕೊಳ್ಳಗಾದರೂ ?? ವಳ ?? ಂತ:ಕರಣದಲ್ಲಿ ಮಾನವೀಯತೆಯ ಸೆಲೆಯಿರುತ್ತದೆ. ಹೀಗೆ ಸಾಗುವ ಈ ಕತೆ ನಿಜಕ್ಕೂ ಪ್ರೇಮಕ್ಕನ ಮಾನವೀಯತೆಯನ್ನ ಎತ್ತಿಹಿಡಿಯುವುದಲ್ಲದೆ, ಸೌಹಾರ್ದತೆಯ ದನಿಯಾಗಿಯೂ ಕಾಣಿಸುತ್ತದೆ.
‘ದನಕರು’ ಕೂಡ ಇಂತಹುದೇ ಸೌಹಾರ್ದತೆಯ ಕತೆಯಾದರೂ ಒಂದು ಸಾಮಾಜಿಕ ಕಳಕಳಿಯನ್ನಿಟ್ಟುಕೊಂಡು ಬರೆದ ಕತೆಯೆನಿಸುತ್ತದೆ. ಗಂಡು ಕರುಗಳನ್ನು, ಗೊಡ್ಡು ಮತ್ತು ಮುದಿ ದನಗಳನ್ನು ಸಾಕಾಲಾರದೆ ಜಬರ್ದಸ್ಥಿಯಿಂದ ಮಾರಬೇಕಾದ ಪರಿಸ್ಥಿತಿಯಲ್ಲಿ ?? ವನ್ನು ಏನು ಮಾಡಬೇಕೆನ್ನುವುದು ಒಂದು ಸಮಸ್ಯೆ. ಆ ಸಮಸ್ಯೆಗಳಿಗೆ ಉತ್ತರವನ್ನು ಕಾಣುವ ಪ್ರಯತ್ನವಿದೆಯಾದರೂ ?? ಲ್ಲಿಯೂ ಕೆಲವೊಂದು ನ್ಯೂನತೆಗಳಿರುವುದನ್ನು ಈ ಕತೆ ಧ್ವನಿಸುತ್ತದೆ. ಇದು ಒಟ್ಟು ಸಮಾಜದ ಪರಿಹಾರ ಕಾಣದ ಸಮಸ್ಯೆಯಂತೆಯೂ ಗೋಚರಿಸುತ್ತದೆ. ಮನುಷ್ಯ ಕೇವಲ ಲಾಭಿಯನ್ನು ಮಾತ್ರ ಚಿಂತಿಸಿದರೆ ಸಮಸ್ಯೆ ಪರಿಹಾರ ಕಾಣುವುದಿಲ್ಲವೆನ್ನುವುದು ಇಲ್ಲಿ ಸ್ಪಷ್ಟವಾಗುತ್ತದೆ.
ಇಂದಿನ ವಾಸ್ತವ ಸಂಗತಿಯನ್ನು ತೆರೆದಿಡುವ ಕತೆ ‘ಸುಣ್ಣ ಎದ್ದು ಹೋದ ಗೋಡೆ’. ಈ ಕತೆಯಲ್ಲಿ ?? ದ:ಪತನಕ್ಕೊಳಗಾಗುತ್ತಿರುವ ಕನ್ನಡ ಶಾಲೆಗಳ ಕಾಳಜಿಯಿರುವ ದುಗ್ಗಪ್ಪ ಮಾಸ್ತರರಿಗೆ ತಾವೇ ಆರಂಭಿಸಿದ ಕನ್ನಡ ಶಾಲೆಯನ್ನು ಮುಚ್ಚುವಾಗಿನ ನೋವು ಲೇಖಕನ ದನಿಯಾಗಿಯೂ ಮೂಡಿ ಬಂದಿರುವುದು ಕತೆಯ ಸಹಜತೆಗೆ ಕಾರಣವಾಗಿದೆ. ಕನ್ನಡ ಶಾಲೆಗಳಲ್ಲಿ ಸೌಲಭ್ಯಗಳಿದ್ದರೂ ವಿದ್ಯಾರ್ಥಿಗಳಿಲ್ಲದೆ ಮುಚ್ಚಬೇಕಾದ ?? ನಿವಾರ್ಯತೆ ಪ್ರಸಕ್ತ ಸಮಸ್ಯೆ. ?? ದನ್ನು ಪರಿಹರಿಸಲಾರದ್ದು ಮೇಷ್ಟ್ರ ಸಾವಿನ ಸಾಂಕೇತವಷ್ಟೆ. ?? ವರು ಉಳಿಸಿದ ಶಾಲೆ ಮತ್ತು ?? ವರು ಕಲಿಸಿದ ವಿದ್ಯಾರ್ಥಿಗಳು ಮೇಷ್ಟ್ರನ್ನ ನೆನಪಿಸಿಕೊಳ್ಳದಿರುವುದಿಲ್ಲ. ?? ಲ್ಲಿ ಕಲಿತ ವಿದ್ಯಾರ್ಥಿಗಳಿಗೆ ‘ಕನ್ನಡ ಶಾಲೆ’ ಎಂದು ?? ದನ್ನು ?? ಭಿಮಾನದಿಂದ ನೆನಪಿಸಿಕೊಳ್ಳುವುದು ಮರೆಯಲಾರದ್ದು. ಆದರೆ ಆಧುನಿಕ ಶಿಕ್ಷಣ ನೀತಿಗೆ ಬದಲಾಗಬೇಕಾದ ?? ನಿವಾರ್ಯತೆಯೊಂದು ತಲೆಯೆತ್ತಿರುವುದರಿಂದ ?? ದು ಪರಿಹಾರವಿಲ್ಲದೆ ಕೊನೆಯಾಗಬೇಕಾಗುತ್ತದೆ.
ಸುಂದರರಾಯರು ತನ್ನದ್ದಲ್ಲದ ಹಣವನ್ನು ಪ್ರಮಾಣಿಕರಾಗಿ ಪೊಲೀಸ್ ಸ್ಟೇಶನ್ಗೆ ಕೊಂಡೊಯ್ಯುವಾಗಲೂ ?? ಲ್ಲಿ ?? ದನ್ನು ತಿಮ್ಮಪ್ಪನ ಹುಂಡಿಗೆ ಹಾಕಲು ಹೇಳುತ್ತಾರೆ. ?? ದನ್ನು ಹಾಗೆ ವಾಪಾಸು ತಂದು ಕುಪ್ಪಣ್ಣಯ್ಯನವರಲ್ಲಿ ಏನು ಮಾಡಬೇಕೆಂದು ?? ವರು ಕೇಳಿದರೆ ಕುಪ್ಪಣ್ಣಯ್ಯ ?? ದನ್ನು ಸ್ಕಾಲರ್ ಶಿಪ್ಗೆ ಉಪಯೋಗಿಸಿಕೊಳ್ಳುವಂತೆ ತಿಳಿಸುತ್ತಾರೆ. ಆದರೆ ಸುಂದರರಾಯರಿಗೆ ?? ದು ಹೊರೆಯಾಗಿ ಕಾಣುತ್ತದೆ. ಇದು ‘ಒದ್ದೆಯಾದ ಆಕಾಶ’ ಕತೆಯ ಉತ್ತರಾರ್ಧ. ಪೂರ್ವಾರ್ಧದಲ್ಲಿ ಇದೇ ಸುಂದರರಾಯರು ಸಮುದ್ರ ತೀರದಲ್ಲಿ ತಮ್ಮೆಲ್ಲಾ ಚಿನ್ನದೊಡವೆಗಳನ್ನು ಕಳೆದುಕೊಂಡಿದ್ದರೂ ?? ದು ದೇವರೇ ಮಾಡಿದನೆನ್ನುವ ನಿರಾಳತೆಯಿಂದಿರುತ್ತಾರೆ. ಆದರೆ ತಮಗೆ ಸಿಕ್ಕ ಹಣವನ್ನು ದೇವರು ಕೊಟ್ಟದ್ದೆಂದು ?? ದನ್ನು ಉಪಯೋಗಿಸಿಕೊಳ್ಳುವುದಿಲ್ಲ. ಬದಲಾಗಿ ಪ್ರಾಮಾಣಿಕರಾಗಿ ?? ದನ್ನು ಸ್ಟೇಶನ್ಗೆ ಕೊಡೊಯ್ಯುವಾಗಲೂ ?? ಲ್ಲಿಯೂ ಎಂತಹ ಪ್ರಮಾಣಿಕತೆ ನೋಡಿ. ಇಲಾಖೆಯವರೂ ?? ದನ್ನು ವಾಪಾಸುತೆಗೆದುಕೊಂಡು ಹೋಗಲು ತಿಳಿಸುತ್ತಾರೆ. ಈ ಕತೆಯಲ್ಲಿ ಎಲ್ಲೂ ಕ್ಲ್ಯಾಶ್ಗಳಾಗಲಿ, ಆಶೆಬುರುಕರಾಗಲಿ ಕಾಣಿಸಿಗುವುದಿಲ್ಲ. ಪ್ರಾಮಾಣಿಕತೆಯಿಂದ ?? ದನ್ನು ಒಳ್ಳೆಯದಕ್ಕೆ ಉಪಯೋಗಿಸಲು ತಿಳಿಸುತ್ತಾರೆ. ಇಲ್ಲಿ ಸುಂದರರಾಯರಿಗೆ ಕಳೆದುಕೊಂಡ ತನ್ನ ಒಡವೆಗಳು ಹಣದ ರೂಪದಲ್ಲಿ ದೊರಕಿದವೆಂದು ಸುಮ್ಮನಿರಬಹುದಿತ್ತು. ಆದರೆ ?? ವರು ಹಾಗೆ ಮಾಡದಿರುವುದರಿಂದ ಗಾಂಧೀಜಿಯನ್ನು ನೆನಪಿಸುತ್ತಾರೆ.
‘ಭೂಮಿ ಮತ್ತು ಆಕಾಶ’ ಆಧುನಿಕತೆಯ ದುರಂತ ಚಿತ್ರಣದ ಕತೆಯಾದರೂ ಕತೆ ನಡೆಯುವುದೆಲ್ಲ ಸೀತಾಪುರದ ಸುತ್ತಮುತ್ತಲ ಮನಸ್ಸುಗಳಲ್ಲಿ. ಕಥೆಯಲ್ಲಿ ಬರುವ ಗೆಂದಗಿಡಿ ಕೋಳಿಯ ಕೂಗು ಮತ್ತು ಸರಿಯಾದ ಸಮಯಕ್ಕೆ ಆಕಾಶದಲ್ಲಿ ಹಾರುವ ವಿಮಾನ, ಸೂರ್ಯ ಪೂರ್ವದಲ್ಲಿ ಹುಟ್ಟುವ ಹಾಗೆ ನಿಖರವಾಗಿ ನಡೆಯುವ ಪ್ರಕ್ರಿಯೆಗಳು. ಇದು ಹಳ್ಳಿಯ ಜನರ ಮುಗ್ಧತೆಯನ್ನೂ ಕೂಡ ಎತ್ತಿ ಹಿಡಿಯುವುದನ್ನು ನಾವು ಗಮನಿಸಬಹುದು. ಈ ಕತೆಯಲ್ಲಿ ವಿಮಾನ ದುರಂತದ ಬಳಿಕ ನಡೆಯುವ ವಿಶ್ಲೇಷಣೆಯೇ ಇದರ ಜೀವಾಳ. ಬದಲಾದ ಪರಿಸ್ಥಿತಿಗೆ ಮುಖ್ಯ ಕಾರಣವೇ ಭಾವನೆಗಳು. ಇದರಿಂದಾಗಿಯೇ ಮುಳಿಹುಲ್ಲಿನ ಮನೆಗಳೆಲ್ಲಾ ತಾರಸಿಯಾದುದು ಎಂಬಂತಹ ಮಾತುಗಳನ್ನು ?? ಲ್ಲಗಳೆಯುವಂತಿಲ್ಲ. ಮುಂದೆ ದುರಂತದಲ್ಲಿ ಮಡಿದ ಸತೀಶ ತನ್ನ ತಮ್ಮ ದಿನೇಶನಿಗೂ ದುಬೈಯಲ್ಲಿ ಕೆಲಸಕ್ಕೆ ?? ವಕಾಶ ಮಾಡಿಸಿರುವ ವಿಷಯ ?? ವನ ಸಾವಿನ ಆನಂತರ ತಿಳಿಯುತ್ತದೆ. ಆದರೆ ದಿನೇಶನಿಗೆ ?? ಲ್ಲಿಗೆ ಹೋಗುವ ನಿರ್ಧಾರವನ್ನು ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಇತ್ತ ?? ಜ್ಜಿ ಹೋಗಬೇಡವೆಂದರೂ ಒಬ್ಬ ಮಗನನ್ನು ಕಳೆದುಕೊಂಡ ದು:ಖಿತ ತಂದೆ ಮಗನನ್ನು ಹೋಗು ?? ನ್ನುವ ಮಾತುಗಳು ಕತೆಯಲ್ಲಿ ಬಹಳ ಪ್ರಭಾವಶಾಲಿಯಾಗಿ ಮೂಡಿದೆ. ಕತೆಯ ?? ಂತ್ಯವನ್ನು ಓದುಗನೇ ಊಹಿಸಿಕೊಳ್ಳುವುದಕ್ಕೆ ?? ನುವು ಮಾಡಿಕೊಟ್ಟಿರುವುದರಿಂದ ಈ ಕತೆ ಓದುಗನಲ್ಲಿಯೇ ಉಳಿದು ಬಿಡುತ್ತದೆ. ಇಲ್ಲಿ ಕುಪ್ಪಣ್ಣಯ್ಯ ಆಕಾಶವನ್ನು ನೋಡುವಲ್ಲಿ ?? ವರಿಗೆ ಸಾವಿನಲ್ಲಿರುವ ನಿರ್ಲಿಪ್ತತೆಯನ್ನು ಕೂಡ ತಿಳಿಸುತ್ತದೆಯೆನಿಸುತ್ತದೆ.
?? ಂತರ್ಜಾತೀಯ ವಿವಾಹ ಸಮಸ್ಯೆಯನ್ನು ಬಹಳಷ್ಟು ಮಾರ್ಮಿಕವಾಗಿ ಚಿತ್ರಿಸುವ ಕತೆ, ‘ಮಳೆಯ ನೀರು ಮತ್ತೆ ಸಮುದ್ರಕ್ಕೆ’. ಇದೊಂದು ಜಾತ್ಯಾತೀತ ರಾಷ್ಟ್ರದಲ್ಲಿ ಪ್ರತಿಯೊಬ್ಬನೂ ಎದುರಿಸಬೇಕಾಗಿರುವ ಸಮಸ್ಯೆಯೊಂದರ ಮುಖಾಮುಖಿಯನ್ನು ತೋರಿಸುತ್ತದೆ. ರಮೇಶ ತಂದೆಗೆ ವಿರುದ್ಧವಾಗಿ ರೋಸಿಯನ್ನು ಮದುವೆಯಾಗಿ ದೂರವೇ ಇದ್ದು ಬಿಡುತ್ತಾನೆ. ?? ಲ್ಲಿಯವರೆಗೆ ?? ವನಿಗೆ ಜಾತೀಯತೆಯೇನೂ ಸಮಸ್ಯೆಯನ್ನು ತಂದೊಡ್ಡುವುದಿಲ್ಲ. ಆದರೆ ?? ವರ ಮಗಳು ಬೆಳೆದು ಒಬ್ಬ ಕ್ರಿಶ್ಚಿಯನ್ ಹುಡುಗನ ಪ್ರೀತಿಯಲ್ಲಿ ಬಿದ್ದಾಗ ?? ವನಿಗೆ ದೊಡ್ಡ ಸಮಸ್ಯೆಯೊಂದು ಎದುರಾಗುತ್ತದೆ. ಆದರೆ ?? ವನ ತಾಯಿ ?? ಂತಕ್ಕ ?? ದನ್ನು ವಿರೋಧಿಸದೆ ಮೊಮ್ಮಗಳನ್ನು ಚರ್ಚ್ಗೆ ಕರೆದುಕೊಂಡು ಹೋಗಿ ಕ್ರಿಸ್ತನ ಆಶೀರ್ವಾದವನ್ನು ಪಡೆದುಕೊಳ್ಳಲು ಮಗನಿಗೆ ಹೇಳುತ್ತಾರೆ. ಮೇಲ್ನೋಟಕ್ಕೆ ಸರಳ ಕತೆಯೆನಿಸಿದರೂ ?? ದು ಎದುರಿಸುವ ಸವಾಲು ಬಹಳ ದೊಡ್ಡದು.
ಮಗಳಿಗೆ ತನ್ನ ನಾಟಿವೈದ್ಯ ವಿದ್ಯೆಯನ್ನು ಧಾರೆಯೆರೆದು ?? ವಳಿಗೆ ಮದುವೆಮಾಡಿಕೊಟ್ಟು ಸೋತ ತಂದೆಯೊಬ್ಬನ ?? ಂತರಾಳದ ಮತ್ತು ಹಠಮಾರಿತನವನ್ನು ತೆರೆದಿಡುವ ನಯವಾದ ಹಾಸ್ಯದಲ್ಲಿ ಬೆಳೆಯುವ ಕತೆ ‘?? ದು ?? ದೂ ?? ಲ್ಲ, ಇದು ಇದೂ ?? ಲ್ಲ!’. ಇದರ ಒಳಗೆ ಇನ್ನೊಂದು ಕತೆಯಾಗಿ ಡಾ. ತಿಮ್ಮಪ್ಪಯ್ಯನವರ ಘಟನೆ ಬೆಳೆಯುತ್ತದೆ. ಇದು ಫ್ಲ್ಯಾಶ್ ಬ್ಯಾಕ್ನಲ್ಲಿದ್ದರೂ ಎಲ್ಲೂ ಓದಿಗೆ ?? ಡ್ಡಿ ಪಡಿಸದೆ ಮುಂದೆ ಸಾಗುತ್ತದೆ. ಇಲ್ಲಿಯ ಪ್ಲಸ್ ಪಾಯಿಂಟ್ ಕೋರ್ಟ್ನಲ್ಲಿ ನಡೆಯುವ ತೀರ್ಪಿನ ಭಾಗ ಮೆಚ್ಚುವಂತದ್ದು.
ಸಂಕಲನದ ಕೊನೆಯ ಕತೆ, ‘ಚಾರಣ’ ದಿಟ್ಟ ಮಹಿಳೆಯೊಬ್ಬಳ ಸುತ್ತಾ ಹೆಣೆದಿರುವಂತದ್ದು. ಹಳ್ಳಿಯಲ್ಲಿ ಶೋಷಣೆಗೆ ಒಳಗಾಗುತ್ತಾ ಬದುಕುವ ?? ದೆಷ್ಟೋ ಹೆಣ್ಣುಗಳಿಗೆ ತುಂಬಕ್ಕೆ ಒಬ್ಬ ಮಾದರಿ ಹೆಣ್ಣಾಗಿ ನಿಲ್ಲುತ್ತಾರೆ. ಕೇವಲ ಹಳ್ಳಿಯವರಿಗಷ್ಟೇ ?? ಲ್ಲ ಆಧುನಿಕ ಮಹಿಳೆಯರಿಗೂ ಆಕೆ ಮಾದರಿಯಾಗಿರುವುದರಿಂದ ತಾಹಶೀಲ್ದಾರನ ಹೆಂಡತಿ ಉಪನ್ಯಾಸಕಿ ಸರಸ್ವತಿ ಕೂಡ ಆಕೆಯ ವ್ಯಕ್ತಿತ್ವಕ್ಕೆ ಮನಸೋತು ಆಕೆಯ ಕಾಲಿಗೆರಗುತ್ತಾಳೆ. ಇಲ್ಲಿ ಗಮನಿಸಬೇಕಾದ ?? ಂಶವೆಂದರೆ ಬಡತನದ ?? ನಿವಾರ್ಯತೆಯಿಂದ ಕಚ್ಚೆಹರುಕ ಶೀನಪ್ಪನ ಕೈಯಲ್ಲಿ ಸಿಕ್ಕಿಹಾಕಿಕೊಂಡು ?? ವರನ್ನು ಎದುರಿಸುವ ದಿಟ್ಟತನ ಗಂಡಸಿನ ದೌರ್ಜನ್ಯಕ್ಕೆ ಕಡಿವಾಣವೊಡ್ಡುವುದನ್ನು ತೋರಿಸಿದರೂ, ?? ದಕ್ಕಿಂತಲೂ ಬಳಿಕ ಶೀನಪ್ಪನವರ ಮೊಮ್ಮಗನೆ ತಹಶೀಲ್ದಾರನಾಗಿ ?? ಲ್ಲಿಗೆ ಬರುವುದು ಓದುಗನಿಗೆ ಕುತೂಹಲವನ್ನು ಹುಟ್ಟಿಸುತ್ತದೆ.
ಇಲ್ಲಿಯ ಕತೆಗಳೆಲ್ಲ ಒಂದಕ್ಕಿಂತ ಒಂದು ಭಿನ್ನವಾಗಿದ್ದು ?? ವುಗಳೆಲ್ಲಾ ಜೀವನೋತ್ಸಾಹವನ್ನು ತುಂಬಿಸುತ್ತವೆ. ಮಾತ್ರವಲ್ಲ, ಸೀತಾಪುರದ ಸನ್ನಿವೇಶಗಳೆಲ್ಲಾ ಮನಸ್ಸಿನಲ್ಲಿ ಬಹಳ ಕಾಲ ಓದುಗನಲ್ಲಿ ಉಳಿದು ಬಿಡುತ್ತದೆ. ಇದೊಂದು ?? ಪರೂಪದ ಕತೆಗಳ ಸಂಕಲವಾಗಿರುವುದರಿಂದ ಸಂಗ್ರಹಯೋಗ್ಯವೂ ಆಗಿದೆ.