ಕನ್ನಡ ಪ್ರಭದಲ್ಲಿ ಪ್ರಕಟವಾದ ಕಥೆ)
ಎತ್ತರದ ಮರಗಳ ನೆರಳಿನಾಸರೆಯ ಹಿಡಿದು ಸಾಗಿದವಳನ್ನು ಸ್ವಾಗತಿಸಿದ್ದು ಬೆಟ್ಟಗಳ ಮರೆಯಿಂದ ಹಾದು ಹಸಿರು ಹುಲ್ಲಿನ ಮೇಲೆ ಸ್ಪಷ್ಟ ಬೆಳಕು ಚೆಲ್ಲಿದ ಮುಂಜಾವಿನ ಸೂರ್ಯನ ಹಿತವಾದ ಕಿರಣಗಳು.ತಲೆಯೆತ್ತಿ ಬೆಟ್ಟದ ತುದಿಯವರೆಗೂ ನೋಟ ಬೀರಿದ ಮುಗ್ಧ ಹುಡುಗಿ ರಶ್ಮಿ ಒಂದು ಕ್ಷಣ ಕಣ್ಣು ಮುಚ್ಚಿ ತೆರೆದಳು.ದೂರದ ಬೆಟ್ಟ ಕಾಣೋದಿಕ್ಕೆ ನುಣ್ಣಗೆ!ಇದೇ ಬೆಟ್ಟದಲ್ಲಿ ಮರೆಯಾಗಿ ಹೋಗಿದ್ದು ತನ್ನ ಕನಸು! ಮುಗ್ಧ ಹುಡುಗಿಗೆ ?? ರಿವಿಲ್ಲದಂತೆ ಕಣ್ಣಂಚಿನಿಂದ ನೀರು ಇಳಿದು ಬಂತು.ಬೆಟ್ಟದ ಪಾಚಿ ಹಿಡಿದ ಬಂಡೆಗಳ ಮೇಲಿನಿಂದ ಹರಿದ ಮಳೆಯ ನೀರು ಉದ್ದಕ್ಕೂ ಕಂದು ಬಣ್ಣದ ರೇಖೆಯನ್ನು ಎಳೆದಂತೆ ಕಾಣುತ್ತಿತ್ತು. ?? ಲ್ಲೊಂದು ಇಲ್ಲೊಂದು ಮೋಡಗಳು ಬೆಟ್ಟದ ಹಸಿರು ಮರಗಳನ್ನು ಮರೆಯಾಗಿಸುವಂತೆ ?? ವಚಿ ಹಿಡಿದಿದ್ದವು.ಕಣ್ಣಿನಿಂದ ಇಳಿದ ನೀರಿಗೆ ಸೀರೆಯ ಸೆರಗನ್ನು ಒತ್ತಿ ಹಿಡಿದು ಬೆಟ್ಟದ ಮೇಲೆ ಒತ್ತೊತ್ತಾಗಿ ಕುಳಿತ ಮೋಡಗಳನ್ನು ನೋಡುತ್ತಿದ್ದಳು.ಇದೇ ಮೋಡಗಳು ತನ್ನ ಕನಸನ್ನು ಮುತ್ತಿಕೊಂಡು ಭಗ್ನಗೊಳಿಸಿದ್ದು!ಆ ದಿನ ರೇಡಿಯೋದ ಮುಂದೆ ಕುಳಿತಿದ್ದ ?? ವಳನ್ನು ಎತ್ತಿ ಪ್ರಪಾತಕ್ಕೆ ಎಸೆದಿದ್ದು ಇದೇ ಮೋಡಗಳು."ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೇ ನಾಲ್ಕು ಹನಿಯ ಚೆಲ್ಲಿ......." ರಾಗವಾಗಿ ಹಾಡುತ್ತಾ, ಹೊರಗೆ ಸುರಿಯುವ ಮಳೆಗೆ ಕಿಟಕಿಯಿಂದ ಮುಖ ತೂರಿಸಿ, ನೆಲದ ಮೇಲೆ ಬಿದ್ದ ಮಳೆ ಹನಿಯ ಹೂವುಗಳನ್ನು ಎಣಿಸುತ್ತಿದ್ದಳು. ಹನಿ ಚೆಲ್ಲಿ ಹೋಗುವ ಮೋಡಗಳಿಗೆ ಎಷ್ಟೊಂದು ಶಕ್ತಿ?ನಿರಂತರವಾಗಿ ಉಲಿಯುತ್ತಿದ್ದ ರೇಡಿಯೋ ಕರ ಕರ ಸದ್ದಿನೊಂದಿಗೆ ?? ವಳನ್ನು ಎಚ್ಚರಿಸಿತ್ತು.ನೆಲ ಬಿರಿದು ಹೋಗುವಂತೆ ಗುಡುಗಿನ ಆರ್ಭಟ!ರೇಡಿಯೋದಲ್ಲಿ ಬಿತ್ತರವಾದ ?? ಪಶಕುನದ ವಾರ್ತೆ!ಬೆಟ್ಟದ ತುದಿಯಲ್ಲಿ ಕ್ಷಣ ಬೆಂಕಿಯುಂಡೆಯಾಗಿ ಉರಿದು ಪುಡಿ ಪುಡಿಯಾಗಿ ನೆಲ ಸೇರಿತು!ಕನಸೂ!
***
ಮರಗಳ ಮರೆಯಲ್ಲಿದ್ದ ಮರದ ಕಾಟೇಜ್ನ ಮುಂದಿದ್ದ ?? ಟ್ಟಣಿಗೆಯನ್ನು ಏರಿ ದೂರದವರೆಗೂ ದೃಷ್ಟಿ ಹೊರಳಿಸಿದಳು ರಶ್ಮಿ. ಒತ್ತೊತ್ತಾಗಿ ಬೆಳೆದಿದ್ದ ದೈತ್ಯಾಕಾರದ ಮರಗಳ ನಡುವಿನಿಂದಲೂ ಎದುರಿಗಿದ್ದ ಬೆಟ್ಟ ಸುಂದರವಾಗಿ ಕಾಣುತ್ತಿತ್ತು. ಕಣ್ಣರಳಿಸಿ ಕುತೂಹಲದ ನೋಟ ಬೀರುತ್ತಿದ್ದವಳನ್ನು ಎಚ್ಚರಿಸಿದ್ದು ?? ಟ್ಟಣಿಗೆಯ ಮೇಲಿಂದ ಇಳಿದು ಕಾಲಿನ ಬಳಿ ಸರಿದ ಕಪ್ಪಗಿನ ಹಲ್ಲಿ!?? ಟ್ಟಣಿಗೆಯ ?? ಂಚನ್ನು ಹಿಡಿದ ಕೈಗಳು ಸಡಿಲಗೊಂಡು, ಸೀರೆಯ ನೆರಿಗೆಯನ್ನು ಮೇಲಕ್ಕೇರಿಸಿ ಮೆಟ್ಟಲುಗಳನ್ನು ಹಾರಿ ಕೆಳಗಿಳಿದು ಕಾಟೇಜ್ನ ಮುಂದೆ ಎದೆಗೆ ಕೈ ಹಚ್ಚಿ ನಿಂತು ದೀರ್ಘ ಉಸಿರು ದಬ್ಬಿದಳು.?? ಟ್ಟಣಿಗೆಯ ದಡ ದಡ ಸದ್ದಿಗೆ ಹೊರಗೆ ಬಂದಿದ್ದ ?? ಡುಗೆಯ ಆಳು ನರಂಗ ಆತಂಕದ ದೃಷ್ಟಿ ಬೀರಿದ. ?? ವನನ್ನು ನೋಡುತ್ತಲೇ ಮತ್ತೊಮ್ಮೆ ಕಣ್ಣು ಮುಚ್ಚಿ ನಿಟ್ಟುಸಿರಿಟ್ಟಳು."ಏನಿಲ್ಲಾ, ಕಪ್ಪು ಹಲ್ಲಿ"ನರಂಗನ ತುಟಿಗಳಲ್ಲಿ ಕಿರು ನಗು ಕಾಣಿಸಿಕೊಂಡಿತು."?? ಯ್ಯೋ, ಒಂದು ಸಣ್ಣ ಹಲ್ಲಿಗೆ ಇಷ್ಟೊಂದು ಹೆದರೋದಾ? ?? ಡುಗೆ ಮನೆಯ ಗೋಡೆಯಲ್ಲೆಲ್ಲಾ ?? ವುಗಳದ್ದೇ ಸಾಮ್ರ್ಆಜ್ಯ""ನಿನ್ನ ?? ಡುಗೆ ಮನೆಯ ಹಲ್ಲಿ ?? ಲ್ಲ ?? ದು. ಕಪ್ಪು ಹಲ್ಲಿ""?? ಂದ್ರೆ.... ದೈತ್ಯ ಹಲ್ಲಿನಾ?""ಓಹೋ! ನಿನ್ನಲ್ಲೆಂತಾ ಮಾತು. ಹೋಗು ನಿನ್ನ ಕೆಲ್ಸ ನೀನು ನೋಡ್ಕೊ"ಕಣ್ಣಗುಡ್ಡೆಗಳು ಹೊರಗೆ ಬರುವಷ್ಟು ?? ಗಲಕ್ಕೆ ಕಣ್ಣುಗಳನ್ನು ?? ಗಲಗೊಳಿಸಿ ?? ವಳ ಹತ್ತಿರ ಬಂದು ಮಾತು ಹೊರಳಿಸಿದ."ನಿಮಗೆ ಗೊತ್ತಿಲ್ಲಮ್ಮಾ. ನೀವು ಹಲ್ಲಿಗಳ ಬಗ್ಗೆ ಹೆದರ್ತೀರಿ... ನಿಮ್ಮ ತಂದೆಗೆ ಹುಚ್ಚು. ?? ರಣ್ಯಾಧಿಕಾರಿಂತ ಇಂತಹ ಭಯ ಹುಟ್ಟಿಸೋ ಕಾಡಿನ ಮಧ್ಯೆ ಇರೋ ಕಾಟೇಜ್ಗೆ ಬರೋದೆ? ಈ ಕಾಡಿನಲ್ಲಿ ರಾಕ್ಷಸರೂ ಇದ್ದಾರಂತೆ. ಎದುರಿಗೆ ಕಾಣಿಸೋ ಆ ಬೆಟ್ಟವಿದ್ಯಲ್ಲಾ. ?? ದರಲ್ಲಿ ?? ವರಿರೋದಂತೆ. ನರ ಬಲೀಂದ್ರೆ ?? ವರಿಗೆ ಪಂಚ ಪ್ರಾಣವಂತೆ""ಇದೇನು ರಾಕ್ಷಸರಿರೋ ಯುಗಾನಾ? ಹೋಗಯ್ಯಾ ನಿನ್ನ ಕೆಲ್ಸ ಮಾಡು" ?? ವನ ಮಾತನ್ನು ತಳ್ಳಿ ಹಾಕುವಂತೆ ಹೇಳಿದಳಾದರೂ ರಶ್ಮಿಯ ಎದೆ ಸಣ್ಣಗೆ ಬಡಿದುಕೊಳ್ಳಲಾರಂಭಿಸಿತು.ಮರಗಳೆಡೆಯಿಂದ ಕಾಣುತ್ತಿದ್ದ ಸುಂದರ ಬೆಟ್ಟವೀಗ ಭಯ ತರಿಸುವ ರಾಕ್ಷಸನಂತೆ ಕಂಡಿತು.ಏಕಾಏಕಿ ಚದುರಿದ್ದ ಮೋಡಗಳು ಬೆಟ್ಟದ ಮೇಲೆ ಒತ್ತೊತ್ತಾಗಿ ಕುಳಿತು ಇನ್ನೇನು ಮಳೆ ಹೊಯ್ಯುವಂತೆ ಕಂಡವು. ತಟ್ಟನೆ ಕಾಟೇಜ್ನ ಕಡೆಗೆ ಕಾಲು ಸರಿಸಿದಳು ಹುಡುಗಿ.ಎದುರಿಗಿನ ಬೆಟ್ಟ ಸಂಪೂರ್ಣ ಮೋಡಗಳಿಂದ ಮರೆಯಾಗಿತ್ತು. ಮುಸ್ಸಂಜೆಯ ಹೊತ್ತು ಮಳೆಯ ಹನಿ ತೀವ್ರತೆ ಪಡೆದು ಧಾರಕಾರವಾಗಿ ಸುರಿಯಲಾರಂಭಿಸಿತು.ತೂಗು ಹಾಕಿದ್ದ ಲಾಂದ್ರಕ್ಕೆ ಎಣ್ಣೆ ಸೇರಿಸಿದ ?? ಡುಗೆಯ ಆಳು. ರಶ್ಮಿ ಬೆಂಕಿ ಪೊಟ್ಟಣ ತಂದು ಕಡ್ಡಿ ಗೀರಿ ಲಾಂದ್ರದ ಗಾಜನ್ನು ಏರಿಸಿ ಹಚ್ಚಿದವಳು, ಬೆಂಕಿ ಕಡ್ಡಿಯ ಬಿಸಿ ಕೈಗೆ ತಾಗುತ್ತಲೇ ಕಡ್ಡಿಯನ್ನು ದೂರಕ್ಕೆಸೆದು ಗಾಜನ್ನು ಕೆಳಗಿಳಿಸಿದಳು. ನರಂಗ ಲಾಂದ್ರವನ್ನು ಛಾವಣಿಯಿಂದ ಇಳಿ ಬಿದ್ದಿದ್ದ ಕೊಕ್ಕೆಗೆ ಸೇರಿಸಿದ. ಮಳೆಯ ಜೊತೆಗಿನ ಗಾಳಿಯ ರಭಸಕ್ಕೆ ಲಾಂದ್ರದ ದೀಪ ಒಂದೇ ದಿಕ್ಕಿಗೆ ಸರಿಯಿತು."ನರಂಗ, ಮುಂಬಾಗಿಲನ್ನು ಹಾಕಿ ಬಿಡು. ಗಾಳಿ, ಮಳೆ ಜೋರಾಗಿದೆ"ನರಂಗ ಎದ್ದು ಬಾಗಿಲನ್ನು ಹಾಕಿ ಚಿಲಕ ಸರಿಸಿದ. ಗೋಡೆಗೆ ತೂಗು ಹಾಕಿದ್ದ ಗಂಟೆ ಏಳು ಬಡಿಯುತ್ತಲೇ, ರಶ್ಮಿ ಕಣ್ಣನ್ನು ಗೋಡೆಯ ಕಡೆಗೆ ಹೊರಳಿಸಿದಳು."ನರಂಗ, ?? ಪ್ಪಯ್ಯ ಎಲ್ಲೋ ಈ ಮಳೆಗೆ ಸಿಕ್ಕಿ ಹಾಕಿಕೊಂಡಿರಬೇಕು"ಹೊರಗೆ ಒಂದೇ ತೆರನಾಗಿ ಸುರಿಯುವ ಮಳೆಗೆ ದೇಹ ತಂಡಿ ಹಿಡಿದಂತಾಗಿ ದಪ್ಪನೆಯ ಉಣ್ಣೆಯ ಕೋಟು ಏರಿಸಿಕೊಂಡ ನರಂಗ."ನೀವು ಹೇಳೋದು ಸರಿಯಾಗಿದೆ. ಗಾಳಿ ನಿಲ್ಲದೆ ?? ವರು ಜೀಪು ಓಡಿಸೋದು ?? ಸಾಧ್ಯ. ಮಳೆ ಹಿಡಿದಿರೋದು ನೋಡಿದ್ರೆ ಪಕ್ಕನೆ ಬಿಡಲಾರದೂಂತ ?? ನಿಸ್ತಿದೆ"ನರಂಗ ಮಾತುಗಳಿಗೆ ಆತಂಕದ ನೋಟ ಬೀರಿದಳು.ಆಗೊಮ್ಮೆ ಈಗೊಮ್ಮೆ ಸುಳಿಯುವ ಮಿಂಚಿನ ಬೆಳಕಿಗೆ ಕಣ್ಣುಗಳನ್ನು ಹೊಂದಿಸಿಕೊಂಡು ಕಿಟಕಿಯ ಬಾಗಿಲುಗಳನ್ನು ತಳ್ಳಿ ಕಾಟೇಜ್ನ ಎದುರಿಗೆ ದೃಷ್ಟಿ ಹಾಯಿಸಿದಳು. ಏನೊಂದು ಕಾಣಿಸದಷ್ಟು ಕಪ್ಪು ಕತ್ತಲು!ಕಾಟೇಜ್ನ ಮುಂದಿನ ದಾರಿಯನ್ನು ಹುಡುಕುವುದು ವ್ಯರ್ಥ ಪ್ರಯತ್ನ. ಒಂದೇ ಸಮನೆ ಸುರಿಯುವ ಮಳೆಯ ರಾಗ. ಮಿಂಚಿನ ಬೆಳಕಿನಲ್ಲಿ ದಾರಿಯನ್ನು ತುಂಬಿ ನಿಂತ ಮಳೆಯ ನೀರು ?? ಸ್ಪಷ್ಟವಾಗಿ ಕಾಣುತ್ತಿತ್ತು. ತಟ್ಟನೆ ದೂರದಲ್ಲಿ ಮಿಣುಕು ದೀಪ ಕಾಣಿಸಿತು!ರಸ್ತೆಯನ್ನು ನುಗ್ಗಿದ ನೀರು, ಜೀಪು ತರೋದಕ್ಕೆ ?? ಡ್ಡಿಯಾಗಿರಬೇಕು. ?? ದಕ್ಕಾಗಿ ?? ಪ್ಪಯ್ಯ ನಡೆದುಕೊಂಡು ಬರುತ್ತಿರಬೇಕು!"ನರಂಗ, ?? ಪ್ಪಯ್ಯ ಬರುತ್ತಿರೋ ಹಾಗಿದೆ. ಇನ್ನೊಂದು ಟಾರ್ಚ್ ಹಿಡಿದು ಹೋಗು" ಕಿಟಕಿಯ ಬಾಗಿಲು ಮುಚ್ಚುತ್ತಾ ಮೂಲೆಯಲ್ಲಿ ಮುದುರಿ ಕುಳಿತಿದ್ದ ?? ಡುಗೆಯಾಳನ್ನು ಕರೆದು ಹೇಳಿದಳು.ಚಳಿಗೆ ಜಡ ಹಿಡಿದಿದ್ದ ದೇಹವನ್ನು ನಿಧಾನಕ್ಕೆ ?? ಲುಗಿಸಿ ಎದ್ದು ನಿಂತ ನರಂಗ.ಮರದ ?? ಲಂಕಾರಿಕ ಬೀರುವಿನಲ್ಲಿದ್ದ ಉದ್ದನೆಯ ಟಾರ್ಚ್ನ್ನು ತೆಗೆದು ?? ವನ ಕೈಗೆ ನೀಡಿದಳು.?? ಗಲಕ್ಕೆ ಬಾಯಿಯನ್ನು ತೆರೆದು ಆಕಳಿಸಿ, ಹೆಜ್ಜೆಯನ್ನು ಹೊರಳಿಸಿದ. ಎದುರಿಗಿನ ಗೋಡೆಯ ಮೊಳೆಗೆ ತೂಗಿಸಿದ್ದ ಮಳೆಯ ನಿಲುವಂಗಿಯನ್ನು ತೆಗೆದು ಧರಿಸಿಕೊಂಡ. ತಲೆಗೆ ಸೇರಿಸಿದ ಟೋಪಿಯನ್ನು ಕಿವಿಯವರೆಗೆ ಎಳೆದು, ಕಾಲಿಗೆ ಗಮ್ ಬೂಟುಗಳನ್ನು ಸೇರಿಸಿದ.ಎದುರಿಗಿನ ಬಾಗಿಲನ್ನು ತೆರೆಯುತ್ತಲೇ ನೀರಿನ ತೇವದ ಗಾಳಿ ಮುಖಕ್ಕೆ ತಟ್ಟುತ್ತಲೇ ಎರಡೆರಡು ಬಾರಿ ಸೀನು ಹಾಕಿದ. ಎಡಗೈಯಿಂದ ಮೂಗನ್ನು ಒರೆಸಿಕೊಂಡು ದಾರಿಯುದ್ದಕ್ಕೂ ನೋಟ ಹರಿಸಿದ. ರಶ್ಮಿ ಕೂಡ ಬಾಗಿಲ ಬಳಿ ನಿಂತಳು.ಸಣ್ಣಗಿನ ಬೆಳಕಿಗಾಗಿ ದೂರದವರೆಗೆ ದೃಷ್ಟಿ ಹಾಯಿಸಿದವಳಿಗೆ ಆಶ್ಚರ್ಯ!ರಸ್ತೆಯ ನೇರ ದಾರಿ ಬಿಟ್ಟು, ಬೆಳಕು ಮರಗಳ ಮಧ್ಯೆ ಕಾಣಿಸಿದಂತಾಯ್ತು. ನರಂಗ ?? ದಾಗಲೇ ಕಾಟೇಜ್ನ ಎದುರಿಗಿನ ರಸ್ತೆಯಲ್ಲಿ ?? ರ್ಧದವರೆಗೂ ಸಾಗಿದ್ದ.ಯಾವುದೋ ಆತಂಕ ?? ವಳನ್ನು ಆವರಿಸಿದಂತಾಯಿತು. ಬಾಗಿಲನ್ನು ಸರಿಸಿ ಚಿಲಕ ಹಾಕಿ ಕಿಟಕಿಯಾಚೆಗೆ ಸರಿದಳು.ಗಂಟೆ ಒಂದೇ ಸಮನೇ ಓಡುತಲಿತ್ತು.ತಾನು ತಿಳಿದುಕೊಂಡಂತೆ ದೂರದಲ್ಲಿ ಕಂಡ ಬೆಳಕು ?? ಪ್ಪಯ್ಯನದಾಗಿದ್ದರೆ ಇಷ್ಟರಲ್ಲಿ ಆತ ಕಾಟೇಜ್ ತಲುಪಬೇಕಿತ್ತು!ಹಾಗಲ್ಲ! ರಸ್ತೆಯುದ್ದಕ್ಕೂ ನೀರು ತುಂಬಿದೆ. ?? ದನ್ನು ತಪ್ಪಿಸಿ ಮರಗಳ ಕಡೆಯಿಂದ ?? ಡ್ಡ ದಾರಿ ಹಿಡಿದು ಬರುತ್ತಿರಬಹುದು.ಕಿಟಕಿಯ ಗಾಜುಗಳನ್ನು ಮುಚ್ಚಿ ಲಾಂದ್ರದ ಬೆಳಕಿನಲ್ಲಿ ಮೂಡಿದ್ದ ನೆರಳನ್ನೇ ನೋಡುತ್ತಿದ್ದಳು. ತಟ್ಟನೆ ಲಾಂದ್ರದ ಬೆಳಕಿಗೆ ಸೋತ ಕೀಟ ?? ವಳ ಮುಖವನ್ನು ಮುದ್ದಿಸಿತು. ಬೆಚ್ಚಿ ಹಿಂದೆ ಸರಿದು ನಿಂತಳು.ಮತ್ತೊಮ್ಮೆ ಮುಖಕ್ಕೆ ಏನೋ ಬಡಿದಂತಾಯಿತು.?? ಲ್ಲ! ?? ದು ಮುಖಕ್ಕೆ ಬಡಿದ ಕೀಟದ ಸದ್ದಲ್ಲ!ಯಾರೋ ಬಾಗಿಲ ಮೇಲೆ ಬಡಿಯುವ ಸದ್ದು!ಒಂದೇ ಉಸುರಿಗೆ ಹಾರಿ, ಬಾಗಿಲಿನ ಚಿಲಕ ಜಾರಿಸಿದಳು.ಬಾಗಿಲು ಇದ್ದಕ್ಕಿದಂತೆ ಬಲವಾಗಿ ತಳ್ಳಿ ಒಳಗೆ ಬಂದ ವ್ಯಕ್ತಿ!ರಶ್ಮಿ ಚಿಟ್ಟನೆ ಚೀರಿ ಹಿಂದಕ್ಕೆ ಹಾರಿದಳು.ಆತ ಚಿಲಕ ಸಿಕ್ಕಿಸಿ ತಲೆಗೆ ಸುತ್ತಿದ್ದ ಬಟ್ಟೆಯ ನೀರನ್ನು ಹಿಂಡಿ ಮುಖ ಒರೆಸಿಕೊಂಡು ಸುತ್ತಲೂ ಪರೀಕ್ಷಕ ನೋಟ ಬೀರಿದ.ಸುಮಾರು ಆರಡಿ ಎತ್ತರದ ?? ಜಾನು ಬಾಹು ವ್ಯಕ್ತಿ! ಮೂವತ್ತರ ಆಚೆ ಈಚೆ ವಯಸ್ಸಿರಬಹುದು. ಉಟ್ಟಿದ ಬಟ್ಟೆಯೆಲ್ಲಾ ತೊಯ್ದು ತೊಪ್ಪೆಯಾಗಿ ನೀರು ಇಳಿಯುತ್ತಿತ್ತು. ಹೆಗಲಿಗೇರಿಸಿದ ನಾಡಕೋವಿಯನ್ನು ಕೆಳಗಿಳಿಸಿ ಬಟ್ಟೆಯಿಂದ ಒರೆಸಿದ."ಮನೆಯಲ್ಲಿ ಬೇರ್ಯಾರಿದ್ದಾರೆ?" ಗಡಸು ಕಂಠಕ್ಕೆ ಬೆದರಿ ನಿಂತವಳನ್ನು ಮತ್ತಷ್ಟು ಮೂಲೆಗೆ ಸರಿಸಿತು ಮಾತು."ನಾನು ನಿನ್ನನ್ನೇ ಕೇಳ್ತಾ ಇರೋದು. ಇಲ್ಲಿ ಬೇರ್ಯಾರು ಇದ್ದಾರೆ?"?? ವನ ಕಂಠ ಇನ್ನಷ್ಟು ಗಡುಸಾಯಿತು."ಯಾರು ...ಇಲ್ಲ... ಯಾರು... ಇಲ್ಲ..." ನಡುಗುವ ದನಿಯಿಂದ ಮಾತು ಹೊರಗೆ ಬಂತು.ಒದ್ದೆ ಬಟ್ಟೆಯ ಕಿಸೆಗೆ ಕೈ ತೂರಿಸಿ ಪ್ಲಾಸ್ಟಿಕ್ ಚೀಲ ತೆಗೆದ. ಒಳಗೆ ಬೆಚ್ಚಗೆ ಕುಳಿತಿದ್ದ ಸಿಗರೇಟಿನ ಪಾಕೆಟನ್ನು ಹೊರ ತೆಗೆದು ತುಟಿಗಿರಿಸಿಕೊಂಡ."ಬೆಂಕಿ ಕಡ್ಡಿ ಬೇಕು" ಮಾತಿನಲ್ಲಿ ನಯವಿರಲಿಲ್ಲ.ಸರಕ್ಕನೆ ಸರಿದು ಸ್ಟಾಂಡ್ನ ಮೇಲಿದ್ದ ಬೆಂಕಿ ಪೆಟ್ಟಿಗೆ ನೀಡಿದಳು. ಒಂದು ಕಡ್ಡಿಯನ್ನು ಎರಡೆರಡು ಬಾರಿ ಗೀರಿದ."ಹಾಳಾದ ಮಳೆ, ಹಾಕಿದ ಯೋಜನೆಯೆಲ್ಲಾ ಹಾಳಾಯ್ತು" ಬೆಂಕಿ ಗಡ್ಡಿ ಉರಿಯುತ್ತಲೇ ಸಿಗರೇಟಿಗೆ ಸೋಕಿಸಿ ಒಂದೆರಡು ಧಂ ಎಳೆದು ಹೊಗೆಯುಗುಳಿದ."ತಿನ್ನೊದಿಕ್ಕೆ ಏನಾದ್ರೂ ಇದೆಯಾ?" ಬಲಕೈಯ ಬೆರಳ ತುದಿಗಳನ್ನು ಒಟ್ಟು ಸೇರಿಸಿ ತುಟಿಯ ಬಳಿ ಎರಡೆರಡು ಬಾರಿ ಸರಿಸಿ ಕೇಳಿದ."ಹಾಂ.. ಇಲ್ಲ......ಇಲ್ಲ...."ಹಲ್ಲಿಯ ಹಾಗೆ ಗೋಡೆಗೆ ?? ಂಟಿಕೊಂಡಂತೆ ನಿಂತಳು.ಕೋವಿಯನ್ನು ಕೈಯಲ್ಲಿ ಹಿಡಿದುಕೊಂಡು ನೇರವಾಗಿ ?? ಡುಗೆ ಮನೆಯೊಳಗೆ ಹೋದ. ರಶ್ಮಿ ಬಿಟ್ಟ ಕಣ್ಣು ಬಿಟ್ಟಂತೆ ನಿಂತೇ ಇದ್ದಳು.ಒಂದೊಂದೇ ಪಾತ್ರೆಯ ಮುಚ್ಚಳ ಸರಿಸಿ ನೋಡುತ್ತಿದ್ದ. ಹೂಜಿಯಲ್ಲಿ ತುಂಬಿದ್ದ ನೀರನ್ನು ಗಟಗಟನೆ ಕುಡಿದು ಹೊರಗೆ ಬಂದ."ನಂಗೆ ಸುಳ್ಳು ಹೇಳ್ತೀಯಾ?" ಒರಟಾಗಿ ಬಂದ ಮಾತಿನ ಜೊತೆಗೆ ಕೋವಿಯ ತುದಿಯನ್ನು ?? ವಳ ಕುತ್ತಿಗೆಯ ಬಳಿ ಹಿಡಿದ."ನಡಿ, ಇರೋದೆಲ್ಲವನ್ನೂ ಒಂದು ತಟ್ಟೆಗೆ ಹಾಕಿ ತಾ. ಇನ್ನು ಹೆಚ್ಚು ಸಮಯ ನಾನು ಇಲ್ಲಿ ನಿಲ್ಲೋದಿಲ್ಲ" ಕೋವಿಯ ತುದಿ ಕೆಳಗಿಳಿಯುತ್ತಲೇ ಹೇಳಿದ ಮಾತುಗಳಿಗೆ ?? ವಳ ಕಾಲುಗಳು ಮಿಂಚಿನ ವೇಗ ಪಡೆದುಕೊಂಡವು.ಸರಸರನೆ ನಡೆದು ದೊಡ್ಡ ಬಟ್ಟಲಿಗೆ ಒಂದಷ್ಟು ?? ನ್ನ, ಸಾಂಬಾರು ಸುರಿದು ?? ವನ ಮುಂದೆ ಹಿಡಿದಳು.ಕೋವಿಯನ್ನು ಹೆಗಲಿಗೇರಿಸಿ ಬಿಗಿದುಕೊಂಡ. ?? ವಳ ಕೈಯಲ್ಲಿದ ತಟ್ಟೆಯನ್ನು ಎಳೆದುಕೊಂಡ. ಬಲಗೈಯನ್ನು ಪ್ಯಾಂಟ್ನ ಹಿಂಬದಿಗೆ ಒರೆಸಿಕೊಂಡು ಗಬಗಬನೆ ತಿನ್ನಲಾರಂಭಿಸಿದ.ಒಂದೆರಡು ನಿಮಿಷದಲ್ಲಿ ತಟ್ಟೆಯನ್ನು ಬರಿದು ಮಾಡಿ ಸರಸರನೆ ನಡೆದು ಮಳೆಯ ಸದ್ದಿನೊಂದಿಗೆ ಕರಗಿ ಹೋದ.
***
ಘಟನೆ ನಡೆದು ವಾರಗಳು ಕಳೆದರೂ ಮಂಕಾಗಿಯೇ ಇರುತ್ತಿದ್ದಳು ರಶ್ಮಿ. ಮಗಳ ಮಂಕುತನಕ್ಕೆ ಬೇರೇನೋ ಕಲ್ಪನೆ ಕೊಟ್ಟ ?? ರಣ್ಯ ?? ಧಿಕಾರಿ ಮಲ್ಲಯ್ಯ."ನಿನಗೇನಾಗಿದೆ ಹೇಳ್ಬಿಡು? ಹೀಗೆ ಮಂಕಾಗಿ ಕುಳಿತಿರೋದ್ರಲ್ಲಿ ?? ರ್ಥವಿಲ್ಲ"ಬರೀ ಕಣ್ಣ ಗುಡ್ಡೆಗಳನ್ನು ?? ಧಿಕಾರಿಯ ಕಡೆಗೆ ತಿರುಗಿಸಿ, ಮಾತನಾಡದೆ ಎದ್ದು ನಿಂತಳು. ?? ಧಿಕಾರಿ ಮಗಳ ಹಿಂದೆಯೇ ಎದ್ದು ಬಂದ. ?? ವಳು ಕಿಟಕಿಗೆ ಆತು ನಿಂತಳು.ಮೂವತ್ತರ ಆಚೀಚೆ ವಯಸ್ಸಿನ, ತೊಯ್ದು ತೊಪ್ಪೆಯಾಗಿದ್ದ ವ್ಯಕ್ತಿ ಕಣ್ಣೆದುರು ಬಂದು ನಿಂತಂತಾಯಿತು. ಒಂದು ಕ್ಷಣ ನರಗಳಲ್ಲಿ ಭಯ ತುಂಬಿ ಮೈ ?? ಲುಗಿಸಿದಳು."ಇನ್ನೇಷ್ಟು ದಿನ ಇಲ್ಲಿರ್ಬೆಕು?" ಮಾತಿನಲ್ಲಿ ನಡುಕ ತುಂಬಿತ್ತು."ಓಹೋ! ಹೀಗಾ?... ಈ ಮಲೆನಾಡಿನ ಮಳೆಯೇ ಹೀಗೆ, ಸುರಿದ್ರೆ ವಾರಾನುಗಟ್ಲೆ ಸುರಿತಾ ಇರುತ್ತೆ. ನಾನು ಒಂದು ಕೆಲಸ ಮಾಡ್ತೀನಿ. ನಾಳೆ ಸಿಟಿಗೆ ಹೋದೋನು ವಿಶಾಲುಗೆ ಫೋನ್ ಮಾಡ್ತೀನಿ. ನೀನು ಬೆಂಗಳೂರಿಗೆ ಹೋಗ್ಬಿಡು. ಮಳೆಗಾಲ ಮುಗಿದ ನಂತರ ಬಂದ್ಬಿಡು"ತಂದೆಯ ಮಾತಿಗೆ ಆಶ್ಚರ್ಯವಾಯಿತು.ಆ ವ್ಯಕ್ತಿ ಮತ್ತೊಮ್ಮೆ ಇಲ್ಲಿಗೆ ಬರಬಹುದು. ?? ವನಿಂದ ತಪ್ಪಿಸಿಕೊಳ್ಳೋದಿಕ್ಕೆ ಇರೋದು ಒಂದೇ ದಾರಿ. ತಾನು ವಿಶಾಲು ಜೊತೆಗೆ ಬೆಂಗಳೂರು ಸೇರಿ ಬಿಡಬೇಕು.ಮನೆಗೆ ಬಂದಿದ್ದ ?? ಪರಿಚಿತ ವ್ಯಕ್ತಿಯ ಬಗ್ಗೆ ?? ಪ್ಪಯ್ಯನಿಗೆ ಹೇಳಿಬಿಡಬೇಕೆಂಬ ಇಚ್ಛೆ ಇದ್ದರೂ ಆ ವಿಷಯ ?? ವಳಲ್ಲೇ ಉಳಿದು ಹೋಯಿತು. ಆದಷ್ಟು ಒಂಟಿಯಾಗಿರದೆ ನರಂಗನನ್ನು ಎಲ್ಲೂ ಹೋಗಗೊಡದೆ ಇದ್ದಳು.ಕಿಟಕಿಯ ಬಳಿ ನಿಂತವಳ ಕಣ್ಣುಗಳು ಯಾಂತ್ರಿಕವಾಗಿ ಬೆಟ್ಟದ ಕಡೆಗೆ ಚಲಿಸಿದವು. ಆಕಾಶದಲ್ಲಿ ಮೋಡಗಳು ತುಂಬಿದ್ದರೂ, ಮಳೆ ಸುರಿಯಲು ಮರೆತಂತಿತ್ತು.ಕಾಲಿಗೆ ಜೋಡುಗಳು ಜೊತೆಯಾಗಿ, ಒದ್ದೆ ನೆಲವನ್ನು ಸ್ಪರ್ಶಿಸಿದವು. ಎಲ್ಲೆಡೆ ಹೊಸ ಚಿಗುರುಗಳು ಪ್ರಕೃತಿಗೆ ಮೆರುಗು ತಂದಂತಿದ್ದವು. ದೂರಕ್ಕೂ ನಡೆದು ಕಳ್ಳಿ ಬೇಲಿಯ ಬಳಿ ನಿಂತಳು ಹುಡುಗಿ. ಕರ್ಕೊಟ್ಟೆಯ ಮುಳ್ಳು ಕಿತ್ತು ಕಳ್ಳಿಯ ಗಿಡಕ್ಕೆ ಚುಚ್ಚಿದಳು. ಕಣ್ಣಿನಲ್ಲಿಳಿದ ನೀರಿನಂತೆ ಕಳ್ಳಿ ಗಿಡದ ಬಿಳಿಯ ಸುನೆ ತಟತಟನೆ ನೆಲಕ್ಕೆ ಬಿಳುತ್ತಿತ್ತು. ತಟ್ಟನೆ ಒದ್ದೆ ತರಗೆಲೆಯ ಚರಪರ ಸದ್ದಿಗೆ ಹಿಂತಿರುಗಿದಳು.ಆರಡಿ ಎತ್ತರದ ?? ದೇ ?? ಜಾನುಬಾಹು ವ್ಯಕ್ತಿ ನಿಂತಿದ್ದ!ಭಯದಿಂದ ಎದೆಗೆ ಕೈ ಹಚ್ಚಿ ಮೆಲ್ಲ ಮೆಲ್ಲನೆ ಹಿಂದಕ್ಕೆ ಸರಿದಳು. ಆತ ಒಮ್ಮೆ ?? ತ್ತಿತ್ತ ಕಣ್ಣಾಡಿಸಿದ."ನಿಂತ್ಕೋ" ?? ದೇ ಗಡಸು ಕಂಠ!ಬಾಯಿಯಿಂದ `ಹಾಂ!' ಉದ್ಗಾರದೊಂದಿಗೆ ಕಾಲಿಗೆ ತಡೆ ಬಿದ್ದಿತು. ಬೆದರಿಕೆಯ ನೋಟದಿಂದ ಬಾಯಗಲಿಸಿ ?? ವನನ್ನೇ ನೋಡುತ್ತಿದ್ದಳು.ಹೆಗಲಿನಲ್ಲಿ ಕೋವಿಯ ಬದಲು ಉದ್ದನೆಯ ಬಟ್ಟೆಯ ಚೀಲ ಇಳಿ ಬಿದ್ದಿತ್ತು! ಕೆನ್ನೆ, ಗಲ್ಲಗಳನ್ನು ಮರೆ ಮಾಡುವಂತೆ ಗಡ್ಡ ಬೆಳೆದಿತ್ತು. ಕಣ್ಣಿನಲ್ಲಿ ಮಾತ್ರ ?? ದೇ ಚುರುಕುತನ!ಉಟ್ಟಿದ್ದ ಮುದ್ದೆ ಮುದ್ದೆಯಾದ ಬಟ್ಟೆ ?? ವನಿಗೆ ಒಪ್ಪುವಂತೆ ಇತ್ತು. ?? ವಳ ಕಣ್ಣುಗಳು ಮತ್ತೊಮ್ಮೆ ?? ವನ ಹೆಗಲಿನ ಕಡೆಗೆ ಸರಿಯಿತು. ಗಂಟಲಿನಲ್ಲಿ ತಡೆಯಂತಿದ್ದ ಉಗುಳು ನುಂಗಿಕೊಂಡು ಯಾಂತ್ರಿಕವಾಗಿ ಬಾಯಿ ಮುಚ್ಚಿಕೊಂಡಿತು. ಆಸರೆಗಾಗಿ ಮರದ ಕೊಂಬೆಯೊಂದನ್ನು ಗಟ್ಟಿಯಾಗಿ ಹಿಡಿದುಕೊಂಡು, ತನ್ನ ಭಾರವನ್ನೆಲ್ಲಾ ?? ದರ ಮೇಲೆ ಹಾಕಿ ನಿಂತಳು.ಆತ ?? ವಳನ್ನು ಓದಿದವರಂತೆ ತುಟಿ ಬಿರಿದು ನಕ್ಕ."ಮತ್ತೆ ನೀನು ಸಿಕ್ಕಿರೋದು ನನ್ನ ?? ದೃಷ್ಟ" ?? ವನ ಮಾತಿನಲ್ಲಿ ಹಿಂದಿನ ಗಡಸುತನವಿರಲಿಲ್ಲ."ನಿನ್ನ ಜೊತೆಗೆ ಬೇರ್ಯಾರಾದರೂ ಇದ್ದಾರಾ?" ತಗ್ಗಿದ ದನಿಯಲ್ಲಿ ?? ತ್ತಿತ್ತ ನೋಟ ಹರಿಸಿ ಕೇಳಿದ."ಊಹುಂ..." ಕುಸಿದು ಬೀಳುವಂತಿತ್ತು ?? ವಳ ಸ್ವರ."ನನಗೆ ಹಸಿವಾಗ್ತಿದೆ. ತಿನ್ನೋದಿಕ್ಕೆ ಏನಾದ್ರು ತಂದು ಕೊಡ್ತೀಯಾ?" ?? ವಳು ಆಸರೆಗಾಗಿ ಹಿಡಿದಿದ್ದ ಕೊಂಬೆಯನ್ನು ಬಿಟ್ಟು ಕೈಯಲ್ಲಿ ಹಸಿರು ಎಲೆಯನ್ನು ಹಿಡಿದು ಸಣ್ಣ ಸಣ್ಣ ಚೂರುಗಳಾಗಿ ಮಾಡುತ್ತಿದ್ದಳು. ?? ವನಿಂದ ತಪ್ಪಿಸಿಕೊಳ್ಳೋದಿಕ್ಕೆ ಇದೊಂದೇ ದಾರಿ!"ಏನು ಆಲೋಚಿಸ್ತಿದ್ದೀಯಾ? ನಿನ್ನ ಹೆದರಿಸೋದಿಕ್ಕೆ ನನ್ನ ಕೈಯಲ್ಲಿ ಕೋವಿಯಿಲ್ಲ. ನಾನು ?? ದನ್ನ ಕೆಳಗಿಟ್ಟಿದೀನಿ. ನನಗೆ ಮೋಸ ಮಾಡ್ಬೇಡ. ಕೂಡ್ಲೆ ಬಂದು ಬಿಡು. ನೀನೇನಾದ್ರೂ ಬರದಿದ್ರೆ ನಿನ್ನ ಕಾಟೇಜ್ ಎಲ್ಲಿದೇಂತ ನನಗೆ ಗೊತ್ತು. ?? ಲ್ಲಿಗೆ ಬರ್ತೀನಿ"ಆತನ ಮಾತು ಮುಗಿಯುತ್ತಿದ್ದಂತೆ ಹಾರು ನಡಿಗೆಯಲ್ಲಿ ಕಾಟೇಜ್ನ ಕಡೆಗೆ ಧಾವಿಸಿದಳು.ಕಾಟೇಜ್ಗೆ ನುಗ್ಗುತ್ತಲೇ ಬಾಗಿಲನ್ನು ತಟಕ್ಕನೆ ಮುಚ್ಚಿ ಚಿಲಕ ಸಿಕ್ಕಿಸಿ, ಬಾಗಿಲಿಗೆ ಒರಗಿ ನಿಂತಳು.ಬಾಗಿಲು ಮುಚ್ಚಿದ ಸದ್ದಿಗೆ ನರಂಗ ಹೊರಗೆ ಬಂದ."ಏನಾಯ್ತು? ಮತ್ತೆ ಕಪ್ಪು ಹಲ್ಲಿನ ನೋಡಿ ಹೆದರ್ಕೊಂಡ್ಬಿಟ್ರಾ?" ವ್ಯಂಗ್ಯ ತುಂಬಿದ ದನಿಯಲ್ಲಿ ಕೇಳಿದ.ಕಣ್ಣುಗಳನ್ನು ವಿಶಾಲಗೊಳಿಸಿ ಸಿಟ್ಟು ಪ್ರದರ್ಶಿಸಿದಳು."ನಿಂಗೆ ಎಲ್ಲವೂ ತಮಾಷೆ""ತಮಾಷೆ ಮಾಡದೆ ಇನ್ನೇನು ಮಾಡ್ಲಿ. ವಾರದ ಹಿಂದೆ ಮಿಂಚುಹುಳದ ಬೆಳಕು ಕಂಡು ?? ಪ್ಪಯ್ಯ ಬಂದ್ರೂಂತ ನನ್ನ ಆ ಜಡಿ ಮಳೆಗೆ ?? ಟ್ಟಿದ್ರಿ..." ಮಾತು ಮುಗಿಯುವ ಮೊದಲೇ ಗಹಗಹಿಸಿ ನಕ್ಕ."ನರಂಗ, ನಿಲ್ಸು..."?? ವಳ ಮಾತಿನ ತೀವ್ರತೆಗೆ ಹೆಗಲ ಮೇಲಿದ್ದ ಬಟ್ಟೆಯನ್ನು ಬಾಯಿಗೆ ಹಿಡಿದು ನಗು ನಿಯಂತ್ರಿಸಿಕೊಂಡ. ?? ವನ ಕಣ್ಣುಗಳು ಗಂಭೀರತೆ ಪಡೆದವು."?? ಪ್ಪಯ್ಯ ಎಲ್ಲಿದ್ದಾರೆ?""ಈಗಷ್ಟೆ ಜೀಪು ತಕ್ಕಂಡು ಹೋದ್ರು"ಸೋತವರಂತೆ ಕುಸಿದು ಕುಳಿತಳು. ನರಂಗನಿಗೆ ಯಾಕೋ ಸಂಶಯ ಸುಳಿಯಿತು."ಮತ್ತೆ ಆ ರಾಕ್ಷಸನ್ನ ನೋಡಿದ್ರಾ?"ಯಾವುದೇ ಪ್ರತಿಕ್ರಿಯೆಯಿಲ್ಲದೆ ಕ್ಷಣ ಕಾಲ ಕುಳಿತಿದ್ದವಳು ಮೆಲ್ಲಗೆ ತಲೆ ?? ಲುಗಿಸಿದಳು. ನರಂಗನ ಮುಖದಲ್ಲೂ ಬೆದರಿಕೆಯ ಛಾಪು ತುಂಬಿತು."ನೀನು ?? ಪ್ಪಯ್ಯಂಗೆ ಆ ವಿಷಯ ಹೇಳಿದ್ದೀಯಾ? ನಾನು ನಿನಗೆ ಹೇಳ್ಬೇಡಾಂತ ತಿಳಿಸಿದ್ದೆ...""ಇಲ್ಲ... ನಾನು ಆ ವಿಷಯ ?? ವರಿಗೆ ತಿಳಿಸಿಲ್ಲ"ನೆಮ್ಮದಿಯ ಉಸಿರು ದಬ್ಬಿ ಎದ್ದು ನಿಂತಳು."ನಾವು ತಪ್ಪು ಮಾಡಿದ್ವಿ. ?? ವನು ಮನೆಗೆ ಬಂದು ಹೋದ ವಿಷಯ ?? ಪ್ಪಯ್ಯನಿಗೆ ತಿಳಿಸಿಬೇಕಿತ್ತು. ಮತ್ತೆ ?? ವನ ಭೇಟಿಯಾಗುತ್ತೇಂತ ನಾನು ?? ಂದ್ಕೊಂಡಿರಲಿಲ್ಲ""ಮತ್ತೆಲ್ಲಿ ?? ವನ್ನ ಕಂಡ್ರಿ?" ಕುತೂಹಲದಿಂದ ಮುಖ ಮುಂದೆ ತಂದ ನರಂಗ."ಕಳ್ಳಿಯ ಬೇಲಿಯ ಹತ್ತಿರ. ?? ವನಿಗೆ ತಿನ್ನೋದಿಕ್ಕೆ ಏನಾದ್ರೂ ಬೇಕಂತೆ""ತಿನ್ನೋದಿಕ್ಕಾ? ಮಾಡಿಟ್ಟ ಆಡುಗೆ ಮಧ್ಯಾಹ್ನಕ್ಕೆ ಖಾಲಿಯಾಗಿದೆ. ರಾತ್ರಿಯ ತಯಾರಿ ಇನ್ನು ಆಗ್ಬೇಕಿದೆ. ಬೇಕಿದ್ರೆ ನಿನ್ನೆ ತಂದಿದ್ದ ಒಣ ಬ್ರೆಡ್ ಇದೆ" ನರಂಗನ ದನಿಯಲ್ಲಿ ಕಂಪನವಿತ್ತು."ನೀನೊಂದು ಕೆಲ್ಸ ಮಾಡು. ನಾನು ಕಾಟೇಜ್ನಲ್ಲಿರ್ತೀನಿ. ನೀನು ಆ ಬ್ರೆಡನ್ನು ?? ವನಿಗೆ ಕೊಟ್ಬಿಟ್ಟು ಬಾ. ಆತ ಇನ್ನೂ ಆ ಕಳ್ಳಿಯ ಬೇಲಿ ಹತ್ರ ಕಾಯ್ತಿರಬಹುದು""ನ... ನಾ...ನು... ಇಲ್ಲ... ನೀವೇ ಹೋಗ್ಬನ್ನಿ" ನಿರಾಕರಿಸಿದ ನರಂಗ.ರಶ್ಮಿಯ ಎದೆಯೊಳಗೆ ಸಣ್ಣಗೆ ಒರೆ ಕಲ್ಲಿಗೆ ಕುಟ್ಟುವ ಹಾಗೇ ಸದ್ದು."ನೀವು ಸುಮ್ನಿರಿ. ?? ವನೇನು ಮಾಡ್ತಾನೆ? ?? ಲ್ಲಿಗೆ ಹೋಗೋದು ಬೇಡ" ನರಂಗ ಹೇಳುವುದರಲ್ಲಿ ಸತ್ಯವಿದೆಯೆನಿಸಿತು. ?? ವನನ್ನು ಯಾಕೆ ಉಪಚರಿಸಬೇಕು?`...ನೀನು ಬರದಿದ್ರೆ ನಿನ್ನ ಕಾಟೇಜ್ಗೆ ಬಂದು ಬಿಡ್ತೀನಿ' ?? ವನ ಮಾತುಗಳು ಎಚ್ಚರಿಸಿದವು."ನರಂಗ, ನೀನೂ ನನ್ನ ಜೊತೆಗೆ ಬಂದು ಬಿಡು. ನಾನು ?? ವನಿಗೆ ತಿನ್ನೋದಿಕ್ಕೆ ಕೊಡದಿದ್ರೆ... ಆತ ಮತ್ತೆ ಇಲ್ಲಿ ಬಂದು ತೊಂದ್ರೆ ಕೊಟ್ಟಾನು"ನರಂಗ ?? ಡುಗೆ ಕೋಣೆಗೆ ನುಗ್ಗಿ ಬ್ರೆಡನ್ನು ಒಂದು ಪ್ಲಾಸ್ಟಿಕ್ ಚೀಲಕ್ಕೆ ಸೇರಿಸಿ ?? ಷ್ಟೇ ವೇಗದಲ್ಲಿ ಹೊರಗೆ ಬಂದ. ಯೋಚಿಸುವಷ್ಟು ಸಮಯವಿಲ್ಲ. ಎದೆ ಬಡಿತ ಏರುತ್ತಿದ್ದಂತೇ ಇಬ್ಬರೂ ಕಲ್ಲುಗಳ ಮೇಲೆ ಕಾಲೂರಿಕೊಂಡು ಕಳ್ಳಿಯ ಗಿಡದ ಬೇಲಿಯ ಬಳಿ ಬಂದು ಮರದ ಮರೆಗೆ ನಿಂತರು."ನೀನು ಮುಂದೆ ಹೋಗು. ?? ದನ್ನ ?? ವನಿಗೆ ಕೊಟ್ಬಿಡು"ನರಂಗ ಹೆದರುತ್ತಲೇ ಕಳ್ಳಿಯ ಬೇಲಿಯ ಬಳಿ ನಡೆದು ಸುತ್ತಲೂ ನೋಡಿದ. ?? ಲ್ಲಿ ಆ ವ್ಯಕ್ತಿ ಇರಲಿಲ್ಲ!ನರಂಗ ಧೈರ್ಯ ತಂದುಕೊಂಡು ಬೇಲಿಯ ಬದಿಯಿಂದ ಕಾಲು ಸರಿಸಿದ. ಮರೆಯಲ್ಲಿ ನಿಂತಿದ್ದ ರಶ್ಮಿ ಇಣುಕಿ ನರಂಗನನ್ನೇ ಗಮನಿಸುತ್ತಿದ್ದಳು.ಏಕಾಏಕಿ ?? ವಳ ಭುಜಗಳ ಮೇಲೆ ಬಲವಾದ ಕೈಗಳು ಬಿದ್ದವು!ಬೆಚ್ಚಿ ಹಿಂತಿರುಗಿದವಳು ಕಿಟಾರನೆ ಕಿರುಚಿದಳು."ಕೊಟ್ಬಿಡು... ಬೇಗ ಕೊಟ್ಬಿಡು... ನಾನು ?? ದನ್ನು ತಿಂದು ದೂರ ಹೋಗ್ತೀನಿ. ಇಲ್ಲಾಂದ್ರೆ... ?? ವರು ನನ್ನ ಸಾಯಿಸಿ ಬಿಡ್ತಾರೆ..."ಹಣೆಯ ಭಾಗದಿಂದ ರಕ್ತ ಸುರಿದು ಎಡ ಕಣ್ಣಿನಿಂದ ಇಳಿದು ಕೆನ್ನೆಯನ್ನೆಲ್ಲಾ ತೋಯಿಸಿತ್ತು. ಯಾರೋ ?? ವನ ತಲೆಗೆ ಭಾರವಾದ ವಸ್ತುವಿನಿಂದ ಹೊಡೆದಂತಿತ್ತು.ನರಂಗ ?? ಲ್ಲಿಗೆ ಓಡು ನಡುಗೆಯಲ್ಲಿ ಬಂದ. ಆ ವ್ಯಕ್ತಿ ರಶ್ಮಿಯ ಹೆಗಲಿಗೆ ಮುಖವಿರಿಸಿದಂತೆ ನಿಂತಿದ್ದ! ರಶ್ಮಿ ಚೇತರಿಸಿಕೊಂಡು ?? ವನನ್ನು ನಿಧಾನಕ್ಕೆ ಹಿಂದಕ್ಕೆ ಸರಿಸಿದಳು. ಆತ ಬಲಹೀನನಂತೆ ತನ್ನ ಭಾರವನ್ನೆಲ್ಲ ?? ವಳ ಮೇಲೆ ಹಾಕಿದ್ದ. ?? ವನ ಕಿಸೆಯಿಂದ ಕಾಗದದ ತುಂಡೊಂದು ಕೆಳಗೆ ಬಿತ್ತು."ನರಂಗ, ಹಿಡ್ಕೋ... ನಿಧಾನಕ್ಕೆ... ಕೂರಿಸ್ಬಿಡು" ರಶ್ಮಿ ಹೇಳುತ್ತಾ ಕೆಳಬಿದಿದ್ದ ಕಾಗದದ ತುಂಡನ್ನು ಎತ್ತಿಕೊಂಡಳು.ನರಂಗನ ಸಹಾಯದಿಂದ ಆತ ಕಲ್ಲು ನೆಲದ ಮೇಲೆ ಕುಳಿತ. ತೊಟ್ಟಿದ್ದ ಬಟ್ಟೆಗಳು ಚಿಂದಿಯಾಗಿ ?? ಲ್ಲಲ್ಲಿ ರಕ್ತ ಒಸರುತ್ತಿದ್ದವು. ನರಂಗ ಕೈಯಲ್ಲಿದ್ದ ಬ್ರೆಡನ್ನು ?? ವನಿಗೆ ನೀಡಿದ. ಹಸಿದು ಕಂಗಾಲಾಗಿದ್ದ ವ್ಯಕ್ತಿ ಗಬ ಗಬ ತಿನ್ನಲಾರಂಭಿಸಿದ. ಆತನ ಕಣ್ಣುಗಳಲ್ಲಿ ಧನ್ಯತೆಯ ಭಾವ ತುಂಬಿತ್ತು. ಚೀಲದಿಂದ ನೀರಿನ ಸೀಸೆಯನ್ನು ತೆರೆದು ಗಟಗಟನೆ ಕುಡಿದು ಸೆಟೆದು ಕುಳಿತ."ನಿಮಗೆ ತೊಂದರೆ ಕೊಟ್ಟಿದ್ದಕ್ಕೆ ಕ್ಷಮಿಸಿ" ಇಬ್ಬರಿಗೂ ಕೈ ಮುಗಿದು ಚೈತನ್ಯ ತುಂಬಿದವರಂತೆ ಎದ್ದು ನಿಂತ.?? ವರು ನೋಡುತ್ತಿದ್ದಂತೆ ಕಲ್ಲು, ಮುಳ್ಳುಗಳ ಕೊರಕಲು ದಾರಿಯ ಇಳಿಜಾರಿಗೆ ನಡೆದು ಹೋದ.ಕಾಟೇಜ್ಗೆ ಮರಳಿದ ರಶ್ಮಿಗೆ ?? ವನೊಬ್ಬ ವಿಚಿತ್ರವಾಗಿ ಕಂಡ. ಯಾವುದೋ ಮೋಸದ ಜಾಲದಲ್ಲಿ ಸಿಕ್ಕಿ ಬಿದ್ದಿರಬಹುದು! ?? ಥವಾ ಯಾರದೋ ಕೈಯ ಸಾವಿನಿಂದ ತಪ್ಪಿಸಿಕೊಂಡು ಬಂದಿರಬಹುದು!"ನರಂಗ, ಈ ವಿಷಯ ?? ಪ್ಪಯ್ಯನಿಗೆ ಹೇಳ್ಬೇಡ. ಹಾಗಂತ ಪ್ರಾಮಿಸ್ ಮಾಡು. ನಾನು ಹೇಗಿದ್ರೂ ಇವತ್ತು ರಾತ್ರಿಗೆ ಬೆಂಗಳೂರಿಗೆ ಹೊರಡ್ತೀನಿ" ಯಾಕೋ ಆ ಏಟು ತಿಂದಿದ್ದ ವ್ಯಕ್ತಿಯ ಬಗ್ಗೆ ಮರುಕ ಹುಟ್ಟಿತು ರಶ್ಮಿಗೆ."ನೀವು ಈ ವಿಷಯಾನ ಮುಚ್ಚಿಟ್ರೆ... ಮತ್ತೊಂದು ದಿನ ನಮಗೇ ?? ಪಾಯವಾಗ್ಬಹುದು. ನಾನು ಹೇಳಿದ್ನಲ್ಲ ಈ ಬೆಟ್ಟದಲ್ಲಿ ರಾಕ್ಷಸರಿದ್ದಾರೇಂತ... ನಿಮ್ಮ ?? ಪ್ಪಯ್ಯನಿಗೆ ಹೇಳಿದ್ರೆ ಏನಾದರೊಂದು ಪರಿಹಾರ ಸೂಚಿಸ್ಬಹುದು"ರಶ್ಮಿಗೇಕೋ ನರಂಗನ ಮಾತು ಹಿಡಿಸಲಿಲ್ಲ."ನರಂಗ, ನೀನು ಪ್ರಾಮಿಸ್ ಮಾಡಿದ್ದೀಯಾ. ಈ ವಿಷಯ ಯಾರಿಗೂ ತಿಳಿಸ್ಬೇಡಾ" ?? ವನನ್ನು ಎಚ್ಚರಿಸುವಂತೆ ಹೇಳಿದಳು.ಪೆಟ್ಟು ತಿಂದಿದ್ದ ?? ಜಾನುಬಾಹು ವ್ಯಕ್ತಿಯ ಬಗ್ಗೆ ಏನೋ ನವಿರು ಭಾವನೆ ರಶ್ಮಿಯ ಎದೆಯಲ್ಲಿ!
***
?? ಂದು ರಾತ್ರಿ ?? ಪ್ಪಯ್ಯನಿಗೆ ಹೇಳಿ ಬೆಂಗಳೂರಿಗೆ ಹೊರಟು ನಿಂತಳು. ಜೀಪು ಕಾಡಿನ ಮಧ್ಯದ ಮಣ್ಣು ರಸ್ತೆಯನ್ನು ಹೆಡ್ಲೈಟ್ನ ಬೆಳಕಿನಲ್ಲಿ ಸೀಳಿಕೊಂಡು ಕುಲುಕುತ್ತಾ ಸಾಗುತ್ತಿತ್ತು.?? ರಣ್ಯ ?? ಧಿಕಾರಿ ಮಲ್ಲಯ್ಯ ಮಗಳ ಕಡೆಗೊಮ್ಮೆ ದೃಷ್ಟಿ ಬೀರಿ ಜೀಪಿನ ವೇಗವನ್ನು ಹೆಚ್ಚಿಸಿದ. ರಶ್ಮಿ ಸೀಟ್ಗೆ ಸರಿದು ಕುಳಿತು ಎದುರಿನ ಕಬ್ಬಿಣದ ಪಟ್ಟಿಯನ್ನು ಗಟ್ಟಿಯಾಗಿ ಹಿಡಿದುಕೊಂಡಳು.ಹಣೆಗೆ ಕೈಯೊತ್ತಿಕೊಂಡಂತೆ ವ್ಯಕ್ತಿಯೊಬ್ಬ ರಪ್ಪನೆ ಜೀಪಿಗೆ ?? ಡ್ಡ ನಿಂತ!ರಶ್ಮಿ ಕಣ್ಣುಗಳನ್ನು ಕಿರಿದುಗೊಳಿಸಿ ನೋಡಿದಳು. ಸಂಶಯವೇ ಇಲ್ಲ, ಕಳ್ಳಿಯ ಬೇಲಿ ಬದಿಗೆ ಕಂಡ ವ್ಯಕ್ತಿ!"ಸರ್, ಆ ಕಡೆಗೆ ಹೋಗೋದಿಕ್ಕೆ ಆಗ್ತಾ ಇಲ್ಲ. ಸೇತುವೆ ಕುಸಿದು ಬಿದ್ದಿದೆ"ಆತ ಹೇಳಿ ?? ಲ್ಲಿ ನಿಲ್ಲದೆ ರಸ್ತೆಯಂಚಿನಿಂದ ಕಾಡಿನೊಳಗೆ ತೂರಿಕೊಂಡ."?? ವನ್ಯಾರು... ನಾನು ಈಗ ತಾನೇ ಸಿಟಿಯಿಂದ ಬಂದೆ" ಆಶ್ಚರ್ಯ ತೋರಿಸಿದ ?? ರಣ್ಯಾಧಿಕಾರಿ.ರಶ್ಮಿಯ ತಲೆಗೇನೋ ಹೊಳೆಯಿತು."?? ಪ್ಪಯ್ಯ, ಹಿಂದಕ್ಕೆ ಹೋಗೋಣ"?? ಧಿಕಾರಿ ಮತ್ತೊಮ್ಮೆ ಮಗಳ ಕಡೆಗೆ ನೋಡಿದ. ?? ವಳ ಮುಖದಲ್ಲಿ ಭೀತಿ ತುಂಬಿದಂತಿತ್ತು.ಕಾಟೇಜ್ಗೆ ಮರಳುವಷ್ಟರಲ್ಲಿ ಮಳೆ ಹನಿಯಲಾರಂಭಿಸಿತು. ಕೈಯಲ್ಲಿದ್ದ ಬ್ಯಾಗನ್ನು ದಡಕ್ಕನೆ ಜಗಲಿಯ ಮೇಲೆ ಎಸೆದು ನಿಂತವಳಿಗೆ ಏನೋ ಭಾರಿ ಸದ್ದು ಕೇಳಿಸಿತು.?? ಧಿಕಾರಿಯೂ ಮುಖ ಹೊರಕ್ಕೆ ತೂರಿಸಿ ನೋಡಿದ.ಸೇತುವೆಯಾಚೆಯಿಂದ ಕೇಳಿಸಿದ ಭಾರಿ ಸ್ಫೋಟ!?? ಂದರೆ ಸೇತುವೆ ಸ್ಫೋಟಗೊಂಡಿದೆ!ತಲ್ಲಣಿಸಿ ಹೋದವರಿಗೆ ಬೆಳಾಗಾಗುವವರೆಗೆ ನಿದ್ದೆ ಸುಳಿಯಲಿಲ್ಲ. ?? ಧಿಕಾರಿ ಜೀಪು ಹಿಡಿದುಕೊಂಡು ಸೇತುವೆಯ ಕಡೆಗೆ ಹೊರಟ.ರಶ್ಮಿ ರೇಡಿಯೋ ಹಚ್ಚಿದಳು.ಗುಡುಗೊಂದು ಬೆಟ್ಟದ ತುದಿಯಲ್ಲಿ ಸ್ಫೋಟಿಸಿದಂತಾಯಿತು. ರೇಡಿಯೋ ಕರಕರ ಸದ್ದು ಹೊರಟಿಸಿತು. ವಾರ್ತೆ ಮಾತ್ರಾ ಮುಂದುವರಿದಿತ್ತು."ಆತ ಹೋರಾಟಗಾರನಾಗಿರಬೇಕು. ಸೇತುವೆ ಸ್ಫೋಟಗೊಂಡಿದ್ದು ?? ವನಿಂದನೇ...""ನರಂಗ, ನನಗೆಲ್ಲಾ ಗೊತ್ತು. ನೋಡು ಈ ಕಾಗದ. ?? ವನ ಕಿಸೆಯಿಂದ ಬಿದ್ದಿರೋದು. ಆತ ನಕ್ಸಲೇಟ್ ಆಗಿದ್ದ. ಆದ್ರೆ... ?? ವರೊಳಗೆ ಮನಸ್ತಾಪ ಬಂದು ?? ವರಿಂದ ಬೇರೆಯಾಗಿದ್ದ. ತಾನು ಒಳ್ಳೆ ವ್ಯಕ್ತಿ ಆಗ್ಬೇಕೂಂತ ಏನೆಲ್ಲಾ ಯೋಜನೆ ಹಾಕಿದ್ನಂತೆ. ಆದ್ರೆ... ಆ ಧೂರ್ತರು ?? ವನನ್ನು ಬಿಡಲಿಲ್ಲ ಕಾಣ್ಬೇಕು. ಎಲ್ಲಿ ತಮ್ಮ ಯೋಜನೆಗಳೆಲ್ಲವನ್ನೂ ಸರಕಾರಕ್ಕೆ ತಿಳಿಸುತ್ತಾನೋ ಏನೋಂತ ?? ವನನ್ನು ಮುಗಿಸ್ಲಿಕ್ಕೆ ನೋಡಿದ್ರು... ಆತ ನಾವು ನೆನ್ನೆ ರಾತ್ರಿಗೆ ಬೆಂಗಳೂರಿಗೆ ಹೊರಟಾಗ ಸೇತುವೆ ಕುಸಿದಿದೇಂತ ಸುಳ್ಳು ಹೇಳಿದ್ದ. ?? ಂದ್ರೆ ಆತನಿಗೆ ಸೇತುವೆಯನ್ನು ಸ್ಫೋಟಗೊಳಿಸುವ ವಿಷಯ ತಿಳಿದಿತ್ತೂಂತ ಕಾಣ್ಸುತ್ತೆ. ನಮ್ಮನ್ನು ಸಾವಿನ ದವಡೆಯಿಂದ ಪಾರು ಮಾಡ್ದ. ಹೀ ಈಸ್ ಗ್ರೇಟ್... ಆದ್ರೆ ಆ ಧೂರ್ತರು ?? ವನು ಒಳ್ಳೆಯವನಾಗೋದಿಕ್ಕೆ ಬಿಡ್ಲಿಲ್ಲ... ನನ್ನ ಕನಸುಗಳನ್ನೂ... ?? ವನ್ನ ಸಾಯಿಸಿದ್ರು...." ಕುಸಿದು ಕುರ್ಚಿಯಲ್ಲಿ ಕುಳಿತು ಮೇಜಿನ ಮೇಲೆ ತಲೆಯಿರಿಸಿದಳು. ಕಣ್ಣಂಚಿನಿಂದ ನೀರಿನ ಹನಿಗಳು ಆತ ಬರೆದಿದ್ದ ಪತ್ರದ ಮೇಲೆ ಬೀಳುತ್ತಿತ್ತು....ನೆನಪಿನಾಳದಿಂದ ಹೊರ ಬಂದವಳನ್ನು ಕರಗಿದ ಮೋಡದ ಹನಿಗಳು ಸ್ವಾಗತಿಸಿದವು.